Breaking News

ವಂಶಪಾರಂಪರ್ಯ ರಾಜಕೀಯದಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ: ಜಗದೀಶ್ ಶೆಟ್ಟರ್

Spread the love

ಮಂಡ್ಯ: ಕಾಂಗ್ರೆಸ್‌ನ ಕುಟುಂಬ ರಾಜಕಾರಣ ವಿರುದ್ಧ ಪಕ್ಷದ ಹಿರಿಯ ಮುಖಂಡರು ಸಿಡಿದು ನಿಂತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ನ 17ಕ್ಕೂ ಹೆಚ್ಚು ಹಿರಿಯ ನಾಯಕರು ಕಾಶ್ಮೀರದಲ್ಲಿ ಸಭೆ ನಡೆಸಿದ್ದು, ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದಿದ್ದಾರೆ. ವಂಶಪಾರoಪರ್ಯ ವ್ಯವಸ್ಥೆ ಇರುವವರೆಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷ ಉದ್ಧಾರ ಆಗುವುದಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ವಂಶಪಾರoಪರ್ಯ ರಾಜಕಾರಣ ನಿಲ್ಲದಿದ್ದರೆ ಪಕ್ಷದ ಬೆಳವಣಿಗೆ ಅಸಾಧ್ಯ ಎಂದು ಅವರದ್ದೇ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಕೇವಲ ರಾಷ್ಟ್ರ ರಾಜಕಾರಣದಲ್ಲಿ ಮಾತ್ರವಲ್ಲದೇ ರಾಜ್ಯ ರಾಜಕಾರಣದಲ್ಲೂ ಇದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಎಂದು ಪಕ್ಷ ಎರಡು ಹೋಳಾಗುತ್ತಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ: ಕಾಂಗ್ರೆಸ್ ರಾಜ್ಯದಲ್ಲಿ ಪ್ರತಿಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದ್ದು, ದಿನಬೆಳಗಾದರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಜಂಗೀ ಕುಸ್ತಿ ನಡೆಯುತ್ತಿದೆ. ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆಯೋ ಗೊತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮುಂದಿನ ದಿನಗಳಲ್ಲಿ ಉಳಿಗಾಲವಿಲ್ಲ ಎಂದು ಭವಿಷ್ಯ ನುಡಿದರು.

ಇತ್ತೀಚೆಗೆ ದೇಶದ ನಾಲ್ಕೈದು ರಾಜ್ಯಗಳಲ್ಲಿ ಅಧಿಕಾರವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಪಶ್ಚಿಮ ಬಂಗಾಳ, ಬಿಹಾರದಲ್ಲಿ ಕಾಂಗ್ರೆಸ್ ನೆಲಸಮವಾಗಿದೆ. ಕರ್ನಾಟಕದಲ್ಲಿ ಅಲ್ಪಸ್ವಲ್ಪ ಅಸ್ತಿತ್ವ ಉಳಿಸಿಕೊಂಡಿತ್ತು. ಮುಂದಿನ ದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲೂ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಹೇಳಿದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ