Breaking News

ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

Spread the love

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 31 ರವರೆಗೆ ನಡೆಯಲಿದೆ.

ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ. ಮಾರ್ಚ್ 8 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಇಂದಿನಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಎರಡು ದಿನ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಚಾರವಾಗಿ ವಿಧಾನಸಭೆಯಲ್ಲಿ ವಿಶೇಷ ಚರ್ಚೆ ನಡೆಯಲಿದೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ನಂತರ ಚರ್ಚೆಗೆ ಅವಕಾಶ ನೀಡಲಾಗುವುದು.

ಇಂದಿನಿಂದ ಮಾರ್ಚ್ 31 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಅಧಿವೇಶನ ನಡೆಯುವ ದಿನಗಳಂದು ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪ್ರತಿಭಟನೆ, ಮೆರವಣಿಗೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

Spread the loveಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ