Breaking News
Home / ಜಿಲ್ಲೆ / ಬೆಂಗಳೂರು / ಮರಳು ಗಣಿಗಾರಿಕೆ: ಅಧ್ಯಯನಕ್ಕೆ ಸರ್ಕಾರ ಸಿದ್ಧವಿದೆಯೇ?: ಹೈಕೋರ್ಟ್

ಮರಳು ಗಣಿಗಾರಿಕೆ: ಅಧ್ಯಯನಕ್ಕೆ ಸರ್ಕಾರ ಸಿದ್ಧವಿದೆಯೇ?: ಹೈಕೋರ್ಟ್

Spread the love

ಬೆಂಗಳೂರು: ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ಪರವಾನಗಿ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಿರುವ ಸಂಬಂಧ ಫ್ರಾಂಕಿ ಡಿಸೋಜಾ ಮತ್ತು ಮಂಗಳೂರಿನ ಇತರ 9 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲನೆ ನಡೆಸಿತು.

‘ಮರಳು ತೆಗೆಯಲು ಅನುಮತಿ ನೀಡುವುದರಿಂದ ಪರಿಸರದ ಮೇಲೆ ಆಗುವ ಹಾನಿ ಮತ್ತು ಗ್ರಾಮಸ್ಥರ ಸಾಂಪ್ರದಾಯಿಕ ಉದ್ಯೋಗದ ಮೇಲೆ ಬೀರುವ ಪರಿಣಾಮದ ಬಗ್ಗೆ ತಜ್ಞ ಸಂಸ್ಥೆಯಿಂದ ಅಧ್ಯಯನ ನಡೆಸಲು ಸರ್ಕಾರ ತಯಾರಿದೆಯೇ ಎಂಬುದು ಪ್ರಶ್ನೆ. ಅಧ್ಯಯನ ನಡೆಸಲು ಸಿದ್ಧವಿರುವ ಬಗ್ಗೆ ಮತ್ತು ಆ ಅಧ್ಯಯನ ಪೂರ್ಣಗೊಳ್ಳುವ ತನಕ ಪರವಾನಗಿ ನೀಡದಿರುವ ಬಗ್ಗೆ ಸರ್ಕಾರ ಹೇಳಿಕೆ ಸಲ್ಲಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಮಾ.12ಕ್ಕೆ ನಿಗದಿ ಮಾಡಿತು.

ಕರ್ನಾಟಕ ಸಣ್ಣ ಖನಿಜ ನಿಯಮಗಳಿಗೆ(1994) ವಿರುದ್ಧವಾಗಿ ಯಾವುದೇ ತಾತ್ಕಾಲಿಕ ಪರವಾನಗಿ ನೀಡಬಾರದು ಎಂದು ಈ ಹಿಂದಿನ ವಿಚಾರಣೆ ವೇಳೆ ಪೀಠ ತಿಳಿಸಿತ್ತು. 2011ರ ನವೆಂಬರ್ 8ರ ಕಚೇರಿ ಜ್ಞಾಪನ ಪತ್ರದ ಪ್ರಕಾರ, ಕರಾವಳಿ ನಿಯಂತ್ರಣಾ ವಲಯದಲ್ಲಿ ಮರಳು ತೆಗೆಯಲು ಅನುಮತಿ ನೀಡಬಹುದು ಎಂದು ಫೆಬ್ರುವರಿ 25ರಂದು ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ