Breaking News

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Spread the love

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಹೀಗೆ ಏಕಾಏಕಿ ರಾಜೀನಾಮೆ ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ