ಬೆಂಗಳೂರು: ನಗರದಲ್ಲಿ ವಿಸ್ಕಿ ಡಿಸ್ಟ್ರಿಬ್ಯೂಟರ್ವೊಬ್ಬರ ಮೇಲೆ ಹಲ್ಲೆಗೈದು, ಕಿಡ್ನ್ಯಾಪ್ ಮಾಡಲು ಯತ್ನಿಸಿರೋ ಘಟನೆ ನಿನ್ನೆ ಸಂಜೆ ನಾಗರಭಾವಿ ಎರಡನೇ ಹಂತದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೋನ್ ಸ್ಟಾಗ್ ವಿಸ್ಕಿ ಡಿಸ್ಟ್ರಿಬ್ಯೂಟರ್ ಅವಿನಾಶ್ ಹಲ್ಲೆಗೊಳಗಾದವರು.
ಅವಿನಾಶ್ರಿಂದ, ಪ್ರವೀಣ್ ಶೆಟ್ಟಿ ಎಂಬುವವರು ₹35 ಲಕ್ಷ ಮೌಲ್ಯದ ಮದ್ಯವನ್ನ ಪಡೆದಿದ್ರು. ಆದ್ರೆ ಕೊರೊನಾ ಶುರುವಾದ ಹಿನ್ನೆಲೆ ವಿಸ್ಕಿ ಡಿಸ್ಟ್ರಿಬ್ಯೂಟ್ ಮಾಡಲಾಗಿಲ್ಲ ಅಂತ ಪ್ರವೀಣ್ ಶೆಟ್ಟಿ ಅವಿನಾಶ್ಗೆ ಹಣ ನೀಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ ಅವಿನಾಶ್, ಪ್ರವೀಣ್ ಶೆಟ್ಟಿ ವಿರುದ್ದ ಕೊರ್ಟ್ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆ ಪ್ರವೀಣ್ ಶೆಟ್ಟಿ ಆಪ್ತ ಜೀವನ್ ಎಂಬಾತ, ಹಣದ ವಿಚಾರವಾಗಿ ಮಾತನಾಡಲು ಅವಿನಾಶ್ರಿಗೆ ಕರೆ ಮಾಡಿ ನಾಗರಭಾವಿ ಬಳಿ ಕರೆಸಿದ್ದ. ಆದ್ರೆ ಹಣ ಕೊಡದೇ ಅವಿನಾಶ್ರನ್ನ ರೂಂನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರವೀಣ್ ಶೆಟ್ಟಿ, ಜೀವನ್, ಮಂಜು ಹಾಗೂ ಪ್ರೀತಂ ಎಂಬ ನಾಲ್ವರು ಹಲ್ಲೆ ಮಾಡಿ, ಅವಿನಾಶ್ರನ್ನ ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಅವಿನಾಶ್ ಪೊಲೀಸರಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಒಡೆದು ಹಾಕಿ ಹಲ್ಲೆಗೈದಿದ್ದಾರೆ. ನಂತರ ಅವಿನಾಶ್ ಕಿರುಚಿಕೊಂಡಾಗ ಸ್ಥಳಿಯರು ಹಾಗೂ ಕಾರು ಚಾಲಕ ಅಜಿತ್ ಸಹಾಯಕ್ಕೆ ಬರುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಸದ್ಯ ಘಟನೆ ಬಗ್ಗೆ ಅವಿನಾಶ್ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಹಲ್ಲೆ ಜೀವಬೆದರಿಕೆ ಹಾಗೂ ಕಿಡ್ನ್ಯಾಪ್ ಯತ್ನ ಆರೋಪಗಳ ಅಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.