Breaking News

ಪಂಚಮಸಾಲಿ ಮೀಸಲಾತಿ ಹೋರಾಟ : ಸಮಾಜದ ಶಾಸಕರು ಸದನದ ಬಾವಿಗಿಳಿದು ಹೋರಾಟ ಮಾಡುವಂತೆ ಸ್ವಾಮೀಜಿ ಕರೆ

Spread the love

ಬೆಂಗಳೂರು : ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಸಮಾಜದ ಶಾಸಕರು ಸದನದ ಬಾವಿಗಿಳಿದು ಹೋರಾಟ ಮಾಡುವಂತೆ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಸಮಾಜದ 22 ಶಾಸಕಕರು ಬೆಂಬಲ ನೀಡಬೇಕು. ಇಲ್ಲದಿದ್ದರೆ ನಾಳೆ ಸಮಾಜದ 22 ಶಾಸಕರನ್ನು ಜನರು ನಿರ್ಲಕ್ಷ್ಯ ಮಾಡುತ್ತಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಯಡಿಯೂರಪ್ಪ ತಮ್ಮ ಪರಮಾಧಿಕಾರ ಬಳಸಿ ಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕು. ನಮ್ಮ ಬೇಡಿಕೆ ಈಡೇರುವವರೆಗೂ ಫ್ರೀಡಂಪಾರ್ಕ್ ನಲ್ಲಿ ಧರಣಿ ಮುಂದುವರೆಯಲಿದೆ . ಅಧಿವೇಶನ ಮುಗಿಯುವಷ್ಟರಲ್ಲಿ ಸಿಎಂ ಸ್ಪಷ್ಟನೆ ನೀಡಬೇಕು. ಇಲ್ಲವಾದರೆ ಅಧಿವೇಶನದ ಬಳಿಕ ಉಪವಾಸ ಸತ್ಯಾಗ್ರಹ ಮಾಡುತ್ತಾನೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ