Breaking News
Home / ರಾಜ್ಯ / ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ

ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ

Spread the love

ಬೆಂಗಳೂರು: ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ರಾಜ್ಯದ ಆರು ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ವಾಭಾವಿಕವಾಗಿ ಇಂತಹ ಆರೋಪ ಬಂದಾಗ ತನಿಖೆಗೆ ಮಂತ್ರಿಗಳು ಸಹಕಾರ ನೀಡಬೇಕು. ವೈಯಕ್ತಿಕವಾಗಿ ಹಲವಾರು ಜನ ಅವರ ಭಾವನೆಗಳನ್ನು ಕೋರ್ಟ್ ನಲ್ಲಿ ವ್ಯಕ್ತಪಡಿಸಬಾರದು ಎಂದು ನಾವು ಮಧ್ಯಪ್ರವೇಶ ಮಾಡಲಾಗದು. ಪ್ರತಿಯೊಬ್ಬ ವ್ಯಕ್ತಿಗೆ ಕೂಡಾ ತನ್ನ ಭವಿಷ್ಯದ ಯೋಚನೆ ಇರುತ್ತದೆ, ಅದನ್ನು ನೋಡಿಕೊಂಡು ಅವರು ಹೆಜ್ಜೆ ಇಡುತ್ತಾರೆ. ಅದು ಅವರವರಿಗೆ ಬಿಟ್ಟ ವಿಚಾರ ಆದರೆ ಅನಾವಶ್ಯಕವಾಗಿ ಕೋರ್ಟ್ ಗೆ ಹೋಗುವುದು ಒಳ್ಳೆಯದಲ್ಲ ಎಂದರು.

ಸಿಡಿ ವಿಚಾರ ಸ್ವಲ್ಪ ಮಟ್ಟಿಗೆ ಮುಜುಗರ ಮಾಡಿರುವುದು ಹೌದು. ರಾಜಕೀಯ ಡೊಂಬರಾಟದಲ್ಲಿ ಸಿಡಿಗಳು ತನ್ನದೇ ಪ್ರಭಾವ ಬೀರುವುದನ್ನು ನೋಡುತ್ತಿದ್ದೇವೆ. ಟೆಕ್ನಾಲಜಿ ಎಷ್ಟು ಮುಂದುವರಿದಿದೆ ಅಂದರೆ ಏನು ಬೇಕಾದರೂ ತಿರುಚಬಹುದು. ಹಾಗಂತ ಆಗಿದ್ದೆಲ್ಲವೂ ತಿರುಚಿದ್ದೆಂದು ಹೇಳುತ್ತಿಲ್ಲ, ತನಿಖೆ ತನ್ನದೇ ಕಾರ್ಯ ಮಾಡುತ್ತದೆ ಎಂದರು.

ನೈತಿಕತೆಗೆ ಪ್ರಾಮುಖ್ಯತೆ ಕೊಡುವುದು ನಮ್ಮೆಲ್ಲರ ಜವಾಬ್ದಾರಿ. ನೈತಿಕತೆಗೆ ತೊಂದರೆ ಬಂದಾಗ ಸಾಮಾಜಿಕ ವ್ಯವಸ್ಥೆ ಕೂಡಾ ಅಧಃಪತನದ ಅಂಚಿಗೆ ಹೋಗುತ್ತದೆ. ಇಂತಹ ವಿಚಾರ ಬಂದಾಗ ರಾಜಕೀಯ ಲಾಭ ಪಡೆಯುವುದರಿಂದ ಒಳ್ಳೆಯದಾಗುವುದಿಲ್ಲ. ಆಡಳಿತಕ್ಕೂ ಇದು ತೊಂದರೆ ಆಗುತ್ತದೆ ಎಂದು ಡಿವಿಎಸ್ ಹೇಳಿದರು.

 

ಜಾರಕಿಹೊಳಿ ವಿಚಾರದಲ್ಲಿ ಕೇಂದ್ರದವರು ನಮ್ಮಲ್ಲಿ ಕೇಳಿದ್ದರು. ಅಂದು ರಾತ್ರಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ನಮ್ಮಲ್ಲಿ ಮಾಹಿತಿ ಕೇಳಿದ್ದರು. ಮಾಧ್ಯಮ ವರದಿ ಆಧಾರಿತವಾಗಿ ನಾವು ವರದಿ ಕೊಟ್ಟಿದ್ದೇವೆ ಎಂದು ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ