Breaking News

ನಟೋರಿಯಸ್ ರೌಡಿ ಚಡ್ಡಿ ಕಿರಣ್‌ಗೆ ಪೊಲೀಸರ ಗುಂಡೇಟು..!

Spread the love

ಬೆಂಗಳೂರು, ಮಾ.7- ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರಾಜಗೋಪಾಲ ನಗರದ ನಟೋರಿಯಸ್ ರೌಡಿ ಕಿರಣ್ ಅಲಿಯಾಸ್ ಚಡ್ಡಿ ಕಿರಣ್ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿಯುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನಂದಿನಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಿರಣ್ ಮತ್ತು ಆತನ ಸಹಚರರು ಕಳೆದ ಮಾರ್ಚ್ 2ರಂದು ವಿನೋದ್ ಎಂಬುವವರ ಮನೆ ಮೇಲೆ ದಾಳಿ ಮಾಡಿ ವಿನೋದ್ ಮತ್ತು ಆತನ ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ನಂದಿನಿ ಬಡಾವಣೆ ಪೊಲೀಸರು ಕಿರಣ್ ಮತ್ತು ಆತನ ಸಹಚರರ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದರು.ಇಂದು ಮುಂಜಾನೆ 4.30ರ ಸಮಯದಲ್ಲಿ ಕಿರಣ್ ಮತ್ತು ಆತನ ಸಹಚರ ದಾಸ ಲಗ್ಗೆರೆ ಸಮೀಪದ ಕಾವೇರಿ ನಗರ ಸೇತುವೆ ಬಳಿ ಇರುವ ಮಾಹಿತಿ ಪಡೆದ ನಂದಿನಿ ಬಡಾವಣೆ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ನವೀದ್ ನೇತೃತ್ವದ ಪೊಲೀಸ್ ತಂಡ ಆತನ ಬಂಧನಕ್ಕೆ ಮುಂದಾಯಿತು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ