Breaking News
Home / ಜಿಲ್ಲೆ / ಬೆಂಗಳೂರು / ಅಶ್ಲೀಲ ಸಿಡಿ ಪ್ರಕರಣ: ಕೊಟ್ಟ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ!

ಅಶ್ಲೀಲ ಸಿಡಿ ಪ್ರಕರಣ: ಕೊಟ್ಟ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ!

Spread the love

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಹೊಸ ತಿರುವು ಮೂಡಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪೊಲೀಸರಿಗೆ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

ಹೌದು, ತಮ್ಮ ವಕೀಲರ ಸಲಹೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೂರು ಹಿಂಪಡೆಯುತ್ತಿರುವುದಾಗಿ ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಕಬ್ಬನ್ ಪಾರ್ಕ್​ ಪೊಲೀಸ್​ ಠಾಣೆಗೆ ತೆರಳಿ ದಿನೇಶ್ ಪರ ವಕೀಲರು ದೂರು ವಾಪಸ್ ಪಡೆಯುವುದಾಗಿ ಪೊಲೀಸರಿಗೆ ತಿಳಿಸಿದ್ಧಾರೆ. ‘ದೂರಿನಲ್ಲಿ ತಾಂತ್ರಿಕ ದೋಷ ಇದ್ದಿದ್ದರಿಂದ ವಾಪಸ್ ಪಡೆದಿದ್ದೇವೆ. ಈ ಬಗ್ಗೆ ದಿನೇಶ್ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ಕೊಡಲಿದ್ದಾರೆ’ ಎಂದು ಕುಮಾರ್ ಪಾಟೀಲ್ ತಿಳಿಸಿದ್ದಾರೆ.

ಆದರೆ, ಪೊಲೀಸ್ ಮೂಲಗಳು ಹೇಳುವ ಪ್ರಕಾರ, ಠಾಣಾ ಮಟ್ಟದಲ್ಲಿ ನೀಡಿದ ದೂರನ್ನು ವಾಪಸ್ ಪಡೆಯಲು ಸಾಧ್ಯವಿಲ್ಲ. ಈಗಾಗಲೇ ಸಂತ್ರಸ್ತ ಯುವತಿಯನ್ನು ಪತ್ತೆ ಮಾಡಲಾಗಿದ್ದು, ಎಫ್​ಐಆರ್​ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಈ ಹಂತದಲ್ಲಿ ದೂರು ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

 

‘ನೌಕರಿ ಕೊಡಿಸುವುದಾಗಿ ಯುವತಿಗೆ ವಂಚಿಸಿ, ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಆಕೆಗೆ ಮತ್ತು ಆಕೆಯ ಕುಟುಂಬದವರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆರೋಪಿಸಿ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಗೆ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು.

ಇದರ ಬೆನ್ನಲ್ಲೇ ದಿನೇಶ್ ಕಲ್ಲಹಳ್ಳಿ ಅಶ್ಲೀಲ ವಿಡಿಯೋವನ್ನೂ ಬಿಡುಗಡೆ ಮಾಡಿದ್ದರು. ಇದರಿಂದ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಇದೀಗ ಉಲ್ಟಾ ಹೊಡೆದಿರುವುದು ಜನರಲ್ಲಿ ಆಶ್ಚರ್ಯ ಮೂಡಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ