Breaking News

Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ

Spread the love

ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

2021-22ನೇ ಸಾಲಿನ ಅಯವ್ಯಯವನ್ನು ಸೋಮವಾರ ಮಂಡಿಸಿದ ಮುಖ್ಯಮಂತ್ರಿ ಈ ವಿಚಾರ ಘೋಷಣೆ ಮಾಡಿದರು.

‘ಲಿಂಗಾಯತ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಣೆ ಮಾಡಿ ₹500 ಅನುದಾನವನ್ನೂ ನಿಗದಿ ಮಾಡಲಾಗಿದೆ. ಅದರಂತೆಯೇ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಲಾಗುತ್ತಿದೆ. ಅದಕ್ಕಾಗಿ ₹500 ಕೋಟಿ ನೀಡಲಾಗುತ್ತಿದೆ,’ ಎಂದು ಘೋಷಿಸಿದರು.

ಮುಖ್ಯಮಂತ್ರಿ ಈ ಘೋಷಣೆ ಮಾಡುತ್ತಲೇ ವಿಧಾನಸಭೆ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದರು.

ಇದೇ ವೇಳೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ ₹1500 ಕೋಟಿ ನೀಡುವುದಾಗಿಯೂ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ