Breaking News

ನಿರ್ದಿಷ್ಟ ಗುರಿ- ಕಾರಣ ಇಲ್ಲದ, ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್: ಪರಮೇಶ್ವರ್ ಟೀಕೆ

Spread the love

ಬೆಂಗಳೂರು: ಯಾವುದೇ ನಿರ್ದಿಷ್ಟ ಗುರಿ, ಕಾರಣ ಇಲ್ಲದಿರುವ ಬಜೆಟ್ ನ್ನು ಸಿಎಂ ಯಡಿಯೂರಪ್ಪ ಬಜೆಟ್ ಮಂಡಿಸಿದ್ದಾರೆ. ಇದು ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್ ಎಂದು ಮಾಜಿ ಸಚಿವ ಪರಮೇಶ್ವರ್ ಟೀಕಿಸಿದ್ದಾರೆ.

ಸಿಎಂ ಬಿಎಸ್ ವೈ, 71 ಸಾವಿರ ಕೋಟಿ ಸಾಲ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಫಿಸಿಕಲ್ ಆಕ್ಟ್ ತಂದಿದ್ದರು. ಅವರ ಪ್ರಕಾರ ಸಾಲ 25 ರಷ್ಟು ಮೇಲೆ ಹೋಗದಂತೆ ಸೂಚಿಸಲಾಗಿತ್ತು. ಅದನ್ನು ಮೀರಿ 26% ಸಾಲ ಪಡೆದಿದ್ದಾರೆ. ಮುಂದಿನ ದಿನದಲ್ಲಿ ಕರ್ನಾಟಕದ ಆಯವ್ಯಯ ಕೆಟ್ಟ ಪರಿಸ್ಥಿತಿ ಬರಲಿದೆ ಎಂದರು.

ಹಸಿರು ಶಾಲು ಹಾಕಿ ಬಜೆಟ್ ಮಂಡಿಸ್ತಿದ್ದಾರೆ. ಆದರೆ ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆ ಕಾಣುತ್ತಿಲ್ಲ. ಇಡೀ ದೇಶದಲ್ಲಿ ಕೃಷಿ ತಿದ್ದುಪಡಿಯನ್ನು ವಿರೋಧಿಸುತ್ತಿದ್ದಾರೆ. ಕೃಷಿ, ನಿರಾವರಿಗೆ ಯಾವುದೇ ಯೋಜನೆ ಕಾಣುತ್ತಿಲ್ಲ ಎಂದರು.

ಅಂಬೇಡ್ಕರ್, ಜಗಜೀವನ್ ಸೇರಿದಂತೆ ಕೆಲ ಕಾರ್ಪೊರೇಷನ್‌ಗಳಿಗೆ 500 ಕೋಟಿ ರೂ. ನೀಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ ಘೋಷಿಸಬೇಕು. ಕಳೆದ‌ ಬಾರಿ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಹೇಳಿ, ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ದಾವೋಸ್‌ಗೆ ತೆರಳಿ ಹೂಡಿಕೆದಾರರನ್ನ ಕರೆದುಕೊಂಡು ಬರೋದಾಗಿ ಹೇಳಿದರು. ಯಾರನ್ನೂ ಸಹ ಕರೆತಂದಿಲ್ಲ ಎಂದು ಪರಮೇಶ್ವರ್ ಟೀಕಿಸಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ