Breaking News

ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ

Spread the love

ಕಾರವಾರ: ಕಾರವಾರ DYSP ಪಿ. ಅರವಿಂದ ಕಲಗುಜ್ಜಿ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ DYSP ಪಿ. ಅರವಿಂದ ಕಲಗುಜ್ಜಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಕಾರವಾರದಿಂದ ಮುಂಡಗೋಡಿಗೆ ಡಿವೈಎಸ್ಪಿ ಅರವಿಂದ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನಕ್ಕೆ ಅಡ್ಡ ಬಂದ ಮಗುವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಓಮ್ನಿ ಕಾರು ರಸ್ತೆಯಲ್ಲಿಯೇ ಉರುಳಿ ಬಿದ್ದಿದೆ. ಕಾರು ನೆಲಕ್ಕುರಳಿದ್ದರಿಂದಾಗಿ ಓಮ್ನಿಯಲ್ಲಿದ್ದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

Spread the loveಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ