Breaking News

ರೈತರು ಪ್ರತಿಭಟನೆ ಮಾಡುತ್ತಿರುವ ಸಿಂಘುವಿನಲ್ಲಿ ಗುಂಡಿನ ದಾಳಿ

Spread the love

ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿ(ಭಾನುವಾರ) ಗುಂಡಿನ ದಾಳಿ ನಡೆದಿದೆ.

ಅಪರಿಚಿತ ನಾಲ್ವರು ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡು ಹಾರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ರೈತರು ಸಾಮೂಹಿಕವಾಗಿ ಊಟ ಮಾಡುತ್ತಿದ್ದ ವೇಳೆ ಬಿಳಿ ಬಣ್ಣ ಆಡಿ ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಕಾರು ಚತ್ತೀಸ್ ಘಡದ ನಂಬರನ್ನು ಹೊಂದಿತ್ತು ಎಂದು ಹೇಳಲಾಗಿದೆ.

ಈ ಬಗ್ಗೆ ರೈತರು ಪೊಲೀಸರಿಗೆ ದೂರು ನೀಡಿದ್ದು, ಗುಂಡು ಹಾರಿಸಿದ ವ್ಯಕ್ತಿಗಳು ಪಂಜಾಬ್ ಮೂಲದವರೆಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ