ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರ ವಿರುದ್ಧ ದೂರು ನೀಡಿದ್ದ ವ್ಯಕ್ತಿ ಎರಡು ದಿನಗಳ ಬಳಿಕ ಅಪಘಾತದಲ್ಲಿ ಮೃತಪಟ್ಟಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅದು ಕೂಡ ತಮ್ಮ ಮಗಳ ವೈದ್ಯಕೀಯ ಪರೀಕ್ಷೆ ನಡೆಯುತ್ತಿದ್ದ ಆಸ್ಪತ್ರೆ ಎದುರಿಗೇ ಅಪಘಾತವಾಗಿ ಮೃತಪಟ್ಟಿದ್ದಾರೆ. ಈ ಘಟನೆ ಉತ್ತರಪ್ರದೇಶದ ಕಾನ್ಪುರ್ನಲ್ಲಿ ನಡೆದಿದೆ. ಇವತ್ತು ಬೆಳಗ್ಗೆ ಟೀ ಕುಡಿಯೋಣ ಅಂತ ವ್ಯಕ್ತಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಈ ವೇಳೆ ಎರಗಿ ಬಂದ ಟ್ರಕ್ ಅವರ ಪ್ರಾಣವನ್ನೇ ತೆಗೆದುಬಿಟ್ಟಿದೆ. ಹೀಗಾಗಿ ಆರೋಪಿ ಕಡೆಯವರೇ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾರಾ ಅನ್ನೋ ಅನುಮಾನ ಹುಟ್ಟಿದೆ. ಅತ್ಯಾಚಾರ ಆರೋಪಿಯ ತಂದೆ ಉತ್ತರಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಸಬ್ ಇನ್ಸ್ಪೆಕ್ಟರ್ ಅಂತೆ. ಹೀಗಾಗಿ ದೂರು ಕೊಟ್ಟ ಬಳಿಕ ನಮಗೆ ಜೀವ ಬೆದರಿಕೆ ಹಾಕಲಾಗ್ತಿದೆ, ಪೊಲೀಸರು ಕೂಡ ಆರೋಪಿಗಳ ಜೊತೆ ಶಾಮೀಲಾಗಿದ್ದಾರೆ ಅಂತ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಹೆದರಿಸಿ ಬೆದರಿಸಿ ಕೇಸ್ ವಾಪಸ್ ಪಡೆಯಲು ಆರೋಪಿಗಳ ಕಡೆಯವರು ಈ ರೀತಿ ಮಾಡಿದ್ದಾರಾ ಅನ್ನೋ ಶಂಕೆ ವ್ಯಕ್ತವಾಗಿದೆ. ಅಂದ್ಹಾಗೆ ಕಾನ್ಪುರ್ನಲ್ಲಿ ಎರಡು ದಿನಗಳ ಹಿಂದಷ್ಟೇ 13 ವರ್ಷದ ಬಾಲಕಿ ಮೇಲೆ ಮೂವರು ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ರು. ಇದೀಗ ಅವರೇ ಇಲ್ಲವಾಗಿದ್ದಾರೆ.
Check Also
ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!
Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …