Breaking News

ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ

Spread the love

ಚಿಕ್ಕೋಡಿ: ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊರೊನಾ ಭೀತಿಗೆ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಷಾರಿಲ್ಲದ್ದಕ್ಕೆ ಯೋಗಕ್ಷೇಮ ವಿಚಾರಿಸಿ ಬಂದಿದ್ದ ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿಯನ್ನು ಕೇಳಿ ಶೋನಾಬಾಯಿ ಪುಂಡಲೀಕ ಪಾಟೋಳ(57) ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಾನು ಭೇಟಿಯಾಗಿ ಬಂದವರಿಗೆ ಪಾಸಿಟಿವ್ ಇದೆಯೋ ಇಲ್ಲವೋ ಎಂಬುದು ಖಚಿತವಾಗದ್ದಕ್ಕೆ ಆತಂಕಕ್ಕಿಡಾಗಿ, ತನಗೂ ಕೊರೊನಾ ತಗುಲಿದರೆ ಮುಂದೆ ಸಂಸಾರದ ಗತಿ ಏನು ಎಂಬ ಚಿಂತೆಯಿಂದ ಮಹಿಳೆ ಅತ್ಮಹತ್ಯೆಗೆ ಶರಣಾಗಿದ್ದಾರೆ. ತನಗೆ ಕೋವಿಡ್-19 ಸೋಂಕು ತಗುಲಿದರೆ ಸೊಸೆಯಂದಿರು, ಮೊಮ್ಮಕ್ಕಳಿಗೂ ಸೋಂಕು ಹರಡುತ್ತದೆ ಎಂದು ಮನೆಯವರ ಪರಿಸ್ಥಿತಿ ನೆನೆದು, ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ