Breaking News

ಗ್ರಾಹಕಿ ಮುಖಕ್ಕೆ ಪಂಚ್; ಜೊಮ್ಯಾಟೊ ಬಾಯ್ ಬಂಧನ

Spread the love

ಬೆಂಗಳೂರು: ‘ಜೊಮ್ಯಾಟೊ’ ಮೊಬೈಲ್ ಆಯಪ್ ಮೂಲಕ ಕಾಯ್ದಿರಿಸಿದ್ದ ಆಹಾರದ ಪೂರೈಕೆ ತಡವಾಗಿದ್ದಕ್ಕಾಗಿ ಗ್ರಾಹಕಿ ಹಾಗೂ ಡೆಲಿವರಿ ಬಾಯ್‌ ನಡುವೆ ಜಗಳವಾಗಿದ್ದು, ಸಿಟ್ಟಾದ ಡೆಲಿವರಿ ಬಾಯ್ ಗ್ರಾಹಕಿಯ ಮುಖಕ್ಕೆ ಪಂಚ್ ಮಾಡಿದ್ದಾನೆ. ಗ್ರಾಹಕಿ ಮುಖಕ್ಕೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬ್ಯಾಂಡೇಜ್‌ ಹಾಕಿಸಿಕೊಂಡಿದ್ದಾರೆ.

‘ಮಂಗಳವಾರ ರಾತ್ರಿ ಆಹಾರ ನೀಡಲು ಬಂದಿದ್ದ ಡೆಲಿವರಿ ಬಾಯ್ ಕಾಮರಾಜ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ’ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಇಂದ್ರಾಣಿ ಎಂಬುವರು ದೂರು ನೀಡಿದ್ದಾರೆ. ಸ್ಥಳೀಯ ನಿವಾಸಿಯೇ ಆಗಿರುವ ಡೆಲಿವರಿ ಬಾಯ್ ಕಾಮರಾಜ್ (28) ಎಂಬಾತನನ್ನು ಬಂಧಿಸಲಾಗಿದೆ’ ಎಂದು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸ್ ಮೂಲಗಳು ಹೇಳಿವೆ.

ಆಗಿದ್ದೇನು?
‘ಪ್ರಸಾದನ ಕಲಾವಿದೆ ಆಗಿರುವ ಇಂದ್ರಾಣಿ, ಜೊಮ್ಯಾಟೊ ಆಯಪ್‌ನಲ್ಲಿ ಮಂಗಳವಾರ ಮಧ್ಯಾಹ್ನ 3.30ಕ್ಕೆ ಊಟ ಆರ್ಡರ್ ಮಾಡಿದ್ದರು. ಗಂಟೆಯಾದರೂ ಆಹಾರ ಬಂದಿದರಲಿಲ್ಲ. ಹೀಗಾಗಿ, ಆರ್ಡರ್ ರದ್ದುಪಡಿಸಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರ್ಡರ್ ರದ್ದಾಗಿ ಕೆಲ ನಿಮಿಷಗಳ ನಂತರ ಸ್ಥಳಕ್ಕೆ ಬಂದಿದ್ದ ಕಾಮರಾಜ್, ತನ್ನ ಬಳಿಯ ಆಹಾರ ಕೊಟ್ಟಿದ್ದ. ತಡವಾಗಿದ್ದಕ್ಕೆ ಆರ್ಡರ್ ರದ್ದುಪಡಿಸಿರುವುದಾಗಿ ಹೇಳಿದ್ದ ಮಹಿಳೆ, ವಾಪಸು ಹೋಗುವಂತೆ ಸೂಚಿಸಿದ್ದರು. ಇದೇ ವಿಚಾರವಾಗಿ ಕಾಮರಾಜ್ ಜಗಳ ತೆಗೆದಿದ್ದ. ‘ನಾನು ನಿಮ್ಮ ಮನೆ ಗುಲಾಮನಲ್ಲ‍’ ಎಂದು ಕೂಗಾಡಿ ಯುವತಿ ಮುಖಕ್ಕೆ ಪಂಚ್ ಮಾಡಿ ಪರಾರಿಯಾಗಿದ್ದ. ಯುವತಿಯ ಮೂಗಿನಿಂದ ರಕ್ತ ಸೋರುತ್ತಿತ್ತು. ಅವರೇ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು, ನಂತರ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ಘಟನೆ ಕುರಿತು ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೊ ಹರಿಬಿಟ್ಟಿರುವ ಮಹಿಳೆ ಇಂದ್ರಾಣಿ, ತಮ್ಮ ಮೇಲಾಗಿರುವ ಹಲ್ಲೆ ವಿವರಿಸಿ ಅಳಲು ತೋಡಿಕೊಂಡಿದ್ದಾರೆ. ‘ಇಂಥ ಘಟನೆಗಳು ಮರುಕಳಿಸಬಾರದು. ನನ್ನ ಸ್ಥಿತಿ ಬೇರೆ ಯಾರಿಗೂ ಬರಬಾರದು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’ ಎಂದೂ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Spread the loveಬೆಂಗಳೂರು: ಜಿಬಿಎ  ವ್ಯಾಪ್ತಿಯ 5 ನಗರ ಪಾಲಿಕೆಯ ವಾರ್ಡ್‌ಗಳಿಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 8ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ