Breaking News

ಹಣ್ಣಿನ ವ್ಯಾಪಾರದಲ್ಲಿ ಗಲಾಟೆ: ಸಂಬಂಧಿಕನ ಮೇಲೆ ಮಚ್ಚಿನಿಂದ ಹಲ್ಲೆ

Spread the love

ಬೀದಿ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುವ ವಿಚಾರಕ್ಕೆ ಗಲಾಟೆ ನಡೆದು, ಸಂಬಂಧಿಕನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ರಾಯಚೂರು ನಗರದ ನೇತಾಜಿ ಸರ್ಕಲ್ ಬಳಿ ಘಟನೆ ನಡೆದಿದೆ.

ಶಬೀರ್ ಹಾಗೂ ಮಹಬೂಬ್ ಎಂಬುವವರು ಜಹೀರ್ ಮೇಲೆ‌ ತೆಂಗಿನಕಾಯಿ ಕಡಿಯುವ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಗಾಯಗೊಂಡಿರುವ ಜಹೀರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಹೀರ್ ಹಾಗೂ ಮಹಬೂಬ್ ಇಬ್ಬರೂ ಸಂಬಂಧಿಕರಾಗಿದ್ದು, ಪಾಟರ್ನರ್ ಆಗಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ವ್ಯಾಪಾರದಲ್ಲಿ ವ್ಯತ್ಯಾಸವಾಗಿ ಬೇರೆ ಬೇರೆಯಾಗುವ ಮೂಲಕ ಪ್ರತ್ಯೇಕ ವ್ಯಾಪಾರ ಮಾಡುತ್ತಿದ್ದರು.

ನೇತಾಜಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ