Breaking News

ಮಾ. 15ರಿಂದ ಬಸ್ ಸಂಚಾರ ಸ್ಥಗಿತ..?

Spread the love

ಉಡುಪಿ, ಮಾರ್ಚ್ 11; ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ ಸರ್ವೀಸ್ ಬಸ್‌ಗಳಿಗೆ ಇದ್ದ ವಿನಾಯಿತಿ ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಮಾರ್ಚ್ 15ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ.

ಹೆಜಮಾಡಿ ಹಳೆ ಎಂಬಿಸಿ ರಸ್ತೆಯಲ್ಲಿ ಸಂಚಾರ ನಡೆಸುವ ಬಸ್‌ಗಳ ಮಾಲೀಕರು ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಉಡುಪಿ ಕೆನರಾ ಷಟಲ್ ಬಸ್ ಸರ್ವೀಸ್ ಹಾಗೂ ಅದರ ಅಂಗ ಸಂಸ್ಥೆ ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘ ಹಾಗೂ ವಿವಿಧ ಟೋಲ್ ವಿರೋಧಿ ಹೋರಾಟ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ಈ ಕುರಿತು ಮಾಹಿತಿ ನೀಡಿದ್ದಾರೆ. “ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎನ್‌ಎಚ್‌ಎಐ ಅಧಿಕಾರಿಗಳು ಟೋಲ್ ವಿನಾಯಿತಿ ನೀಡುವ ಆಶ್ವಾಸನೆ ನೀಡಿದ್ದರು” ಎಂದರು.

“ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿವೆ. ಆದ್ದರಿಂದ, ಅನಿವಾರ್ಯವಾಗಿ ಬಸ್ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಲು ತೀರ್ಮಾನಿಸಿದ್ದೇವೆ. ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಬಸ್‌ಗಳಿಗೆ ವಿನಾಯಿತಿ ನೀಡಬೇಕು, ಸುರತ್ಕಲ್ ಟೋಲ್ ತೆರವುಗೊಳಿಸಬೇಕು. ಇಲ್ಲವಾದಲ್ಲಿ ವಿವಿಧ ಸಂಘಟನೆಗಳ ಜೊತೆ ಸೇರಿ ಬೃಹತ್ ಹೋರಾಟ ರೂಪಿಸಲಾಗುತ್ತದೆ. ಟೋಲ್‌ ಪ್ಲಾಜಾಗಳಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ