Breaking News

ಬಿಜೆಪಿ ಸೇರಿದ್ದಕ್ಕೆ ಮುಸ್ಲಿಂ ಸಮಾಜದಿಂದಲೇ ಬಹಿಷ್ಕಾರ

Spread the love

ಹುಬ್ಬಳ್ಳಿ: ಬಿಜೆಪಿ ಸೇರಿದ್ದಕ್ಕೆ ಮುಸ್ಲಿಂ ಮುಖಂಡರೊಬ್ಬರನ್ನು ಜಮಾತ್‍ನಿಂದ ಹೊರ ಹಾಕಿದ್ದು, ನನಗೆ ನ್ಯಾಯ ಕೊಡಿಸಬೇಕು. ಬಹಿಷ್ಕಾರ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಸಮಾಜದ ಮುಖಂಡ ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾರೆ.

ನಗರದ ಮುಲ್ಲಾ ಓಣಿಯ ಅಬ್ದುಲ್ ಮುನಾಫ್ ಐನಾಪುರಿ ಅವರು ಮಾರ್ಚ್ 7ರಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರಿರುವ ಹಿನ್ನೆಲೆಯಲ್ಲಿ ತಮ್ಮನ್ನು ಜಮಾತ್‍ನವರು ಹೊರ ಹಾಕಿದ್ದಾರೆ ಎಂದು ಅಬ್ದುಲ್ ಮುನಾಫ್ ಐನಾಪುರಿ ಆರೋಪಿಸಿದ್ದು, ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೆ ಮುಲ್ಲಾ ಓಣಿಯ ಮಸೀದಿಯಲ್ಲಿನ ವಕ್ಫ್ ಬೋರ್ಡ್ ಕಟ್ಟಡದಲ್ಲಿ ನಮ್ಮ ಕುಟುಂಬ 40 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಅಂಗಡಿಯನ್ನು ತೆರವು ಮಾಡುವಂತೆ ಒತ್ತಡ ಹೇರಿ, ನೋಟಿಸ್ ನೀಡಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿದೆ ಎಂದು ಅಬ್ದುಲ್ ಐನಾಪುರಿ ಆರೋಪಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸಮ್ಮುಖದಲ್ಲಿ ಅವರ ನಿವಾಸದಲ್ಲಿ ಬಿಜೆಪಿ ಸೇರಿದ್ದೇನೆ. ಅಂದೇ ಜಮಾತ್‍ನ ಸಭೆ ನಡೆಸಿ, ಬಿಜೆಪಿ ಸೇರಿರುವುದಕ್ಕೆ ಆಕ್ಷೇಪಿಸಿದ್ದಾರೆ. ಅಲ್ಲದೆ ಬಿಜೆಪಿ ಏಕೆ ಸೇರಿದೆ ಎಂದು ಸಮಾಜದ ಮುಖಂಡರು ಪ್ರಶ್ನಿಸಿದರು. ನಂತರ ಬಿಜೆಪಿ ಸೇರಿದ್ದಕ್ಕೆ ಬಹಿಷ್ಕಾರ ಮಾಡುತ್ತೇವೆ. ಇಲ್ಲದಿದ್ದಲ್ಲಿ ಬಿಜೆಪಿ ಬಿಟ್ಟು ಬಾ ಎಂದು ಒತ್ತಾಯಿಸಿದರು. ಇದಕ್ಕೆ ಒಪ್ಪದ್ದಕ್ಕೆ ನನ್ನ ಅಂಗಡಿ ಖಾಲಿ ಮಾಡುವಂತೆ ತಿಳಿಸಿದ್ದಾರೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ