ಡೆಹ್ರಾಡೂನ್ : ಮೇ. 17 ರಿಂದ ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥದಲ್ಲಿರುವ ಶಿವನ ದೇವಸ್ಥಾನ ಭಕ್ತರಿಗೆ ಮುಕ್ತವಾಗಲಿದೆ ಎಂದು ಉತ್ತರಾಖಂಡ ಚಾರ್ ಧಾಮ್ ದೇವಸ್ಥಾನಂ ವ್ಯವಸ್ಥಾಪಕ ಮಂಡಳಿ ತಿಳಿಸಿದೆ.
ಮೇ. 14 ರಂದು ಶಿವನ ವಿಗ್ರಹವನ್ನು ಓಂಕಾರೇಶ್ವರ ದೇವಾಲಯದಿಂದ ಹೊರ ತೆಗೆದು, ಮೇ. 17 ರಿಂದ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
ಕೇದಾರನಾಥ ದೇವಾಸ್ಥಾನವನ್ನು ಕಳೆದ ವರ್ಷ ನವೆಂಬರ್ 16 ರಂದು ಮುಚ್ಚಲಾಗಿತ್ತು. ಕಳೆದ ವರ್ಷ ನವೆಂಬರ್ 19 ರಂದು ಮುಚ್ಚಲಾಗಿದ್ದ ಬದರೀನಾಥ ದೇವಾಸ್ಥಾನವನ್ನು ಮೇ. 18 ರಂದು ತೆರೆಯಲಾಗುವುದು. ಮೇ. 14 ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳಿಗೆ ಭಕ್ತರಿಗೆ ಅವಕಾಶ ನೀಡಲಾಗಿದೆ.
Laxmi News 24×7