ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಗುರುವಾರ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಪದವಿ ಮುಂದಿರುವ ಉಪ ಹೋಗಿ ಆದಷ್ಟು ಬೇಗ ಮುಖ್ಯಮಂತ್ರಿಯಾಗಲಿ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದರು.
ಈ ಹೇಳಿಕೆಯನ್ನೇ ದಾಳವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಲಾಗದೆ ಸದನದಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಪತ್ತೆಯಾದರೆ, ಇತ್ತ ಡಿವಿ ಸದಾನಂದಗೌಡ ಮುಖ್ಯಮಂತ್ರಿ ಗಾದಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಹೆಸರನ್ನು ತೇಲಿಬಿಡುತ್ತಿದ್ದಾರೆ. ಬಿಎಸ್ ವೈ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ ಎಂದು ಹೇಳಿದೆ.
ಅತ್ತ ಸಿಎಂ ಸದನದಿಂದ ಸ್ವಪಕ್ಷದ ಶಾಸಕ @BasanagoudaBJP ಅವರಿಗೆ ಉತ್ತರಿಸಲಾಗದೆ ನಾಪತ್ತೆಯಾಗಿದ್ದರು!
ಇತ್ತ @DVSadanandGowda ಅವರು ಸಿಎಂ ಗಾದಿಗೆ @drashwathcn ಹೆಸರನ್ನು ತೇಲಿ ಬಿಡುತ್ತಿದ್ದಾರೆ.#BSYmuktaBJP ಸಿದ್ಧತೆ ಜೋರಾಗಿದೆ.@BSYBJP ಅವರ ಮುಂದಿನ ದಾರಿ ಮಾರ್ಗದರ್ಶಕ ಮಂಡಲವೋ ಅಥವಾ ದವಳಗಿರಿಯೋ @BJP4Karnataka?! pic.twitter.com/hZvef9CLpG
— Karnataka Congress (@INCKarnataka) March 12, 2021