Breaking News

ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದ ಪ್ರಕರಣಕ್ಕೆ ಕರವೇ ಕಾರ್ಯಕರ್ತರ ತಿರುಗೇಟು

Spread the love

ಬೆಳಗಾವಿ: ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದ ಪ್ರಕರಣಕ್ಕೆ ಕರವೇ ಕಾರ್ಯಕರ್ತರು ತಿರುಗೇಟು ನೀಡಿದ್ದು, ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಹೊರವಲಯದ ಗಾಂವಕರಿ ಹೋಟೆಲ್, ಡಾಬಾ, ಅಂಗಡಿ ಮುಂಗಟ್ಟುಗಳ ಮೇಲೆ ಹಾಕಿದ್ದ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು, ಕೆಲ ನಾಮಫಲಕಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಶಿವಸೇನೆ ನಾಯಕನ ವಿರುದ್ಧ ಕರವೇ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬೆಳಗಾವಿಯಲ್ಲಿ ಶಿವಸೇನೆ ಮುಖಂಡನ ಕಾರಿನ ಫಲಕವನ್ನು ಕಿತ್ತು ಹಾಕಿದ್ದಾರೆ.


Spread the love

About Laxminews 24x7

Check Also

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ

Spread the love ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ