ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.
ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.