ಬೀದರ್: ಮಾಜಿ ಸಚಿವ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.
ಭಾಲ್ಕಿಯ ವಾಲಿ ಬಡಾವಣೆಯ ಅವಿನಾಶ್ ಎಂಬಾತನನ್ನು ಎಸ್ಐಟಿ ಅಧಿಕಾರಿಗಳ ತಂಡ ಶುಕ್ರವಾರ ಮಧ್ಯರಾತ್ರಿ ವಶಕ್ಕೆ ಪಡೆದಿದ್ದು, ಯುವಕ ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿಯ ಗೆಳೆಯನಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನೂ ಯುವಕನ ಮನೆ ಮೇಲೆ ದಾಳಿ ಮಾಡಿರುವ ಎಸ್ಐಟಿ ತಂಡಕ್ಕೆ ಯುವಕನಿಗೆ ಸೇರಿದ ಲ್ಯಾಪ್ ಟಾಪ್ ಮತ್ತು ಸಿಡಿಗಳು ಪತ್ತೆಯಾಗಿವೆ ಎಂದೆನ್ನಲಾಗಿದೆ.