Breaking News
Home / Uncategorized / ಲಾಕ್‍ಡೌನ್ ಮುಗಿದಿದ್ದೆ ತಡ ರೈಲ್ವೆ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತ ಜನ…

ಲಾಕ್‍ಡೌನ್ ಮುಗಿದಿದ್ದೆ ತಡ ರೈಲ್ವೆ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತ ಜನ…

Spread the love

ಬೆಂಗಳೂರು: ಒಂದು ವಾರದ ಲಾಕ್‍ಡೌನ್ ಅಂತ್ಯವಾಗಿದ್ದೆ ತಡ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಬೇರೆ ರಾಜ್ಯದವರು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಕಡೆ ಮುಖ ಮಾಡಿದ್ದಾರೆ.

ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾತ್ರ ಲಾಕ್‍ಡೌನ್ ಮಾಡಲಾಗಿತ್ತು. ರೈಲು ಮತ್ತು ವಿಮಾನ ಓಡಾಟವನ್ನು ನಿಲ್ಲಿಸಿರಲಿಲ್ಲ. ಆದರೆ ರೈಲ್ವೆ ನಿಲ್ದಾಣಕ್ಕೆ ಹೋಗಲು ಯಾವುದೇ ಬಸ್, ಆಟೋ, ಕ್ಯಾಬ್ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೇರೆ ಬೇರೆ ರಾಜ್ಯದ ಕಾರ್ಮಿಕರು ಒಂದು ವಾರ ಬೆಂಗಳೂರಿನಲ್ಲಿ ಲಾಕ್‍ಡೌನ್ ಆಗಿದ್ದರು. ಇದೀಗ ಲಾಕ್‍ಡೌನ್ ಅಂತ್ಯವಾಗುತ್ತಿದ್ದಂತೆ ಕಾರ್ಮಿಕರು ರೈಲ್ವೆ ನಿಲ್ದಾಣದ ಕಡೆ ಬರುತ್ತಿದ್ದಾರೆ

ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ಮುಂದೆ ಜನ ಕ್ಯೂ ನಿಂತಿದ್ದು, ಸಾವಿರಾರು ಜನ ಲಗೇಜ್ ಸಮೇತ ಬೆಂಗಳೂರನ್ನ ತೊರೆಯುತ್ತಿದ್ದಾರೆ. ಬೆಳ್ಳಂಬೆಳ್ಳಗ್ಗೆ ಹೊರ ರಾಜ್ಯದವರು ಬೆಂಗಳೂರನ್ನ ತೊರೆಯಲು ಮುಂದಾಗಿದ್ದು, ಬಿಹಾರ, ಪಾಟ್ನಾ ಮತ್ತು ಅಸ್ಸಾಂ ಕಡೆ ಹೋಗುವುದಕ್ಕೆ ಕಾರ್ಮಿಕರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಹಾಕಿಕೊಳ್ಳದೆ ಜನ ಲಗೇಜ್ ಇಟ್ಟಿಕೊಂಡು ಕಾಯುತ್ತಿದ್ದಾರೆ.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ