Breaking News
Home / ಜಿಲ್ಲೆ / ಬೆಂಗಳೂರು / “ವಿಡಿಯೋದಲ್ಲಿ ಹೇಳಿದರೆ ಸಾಲದು, ಖುದ್ದು ದೂರು ನೀಡಬೇಕು”

“ವಿಡಿಯೋದಲ್ಲಿ ಹೇಳಿದರೆ ಸಾಲದು, ಖುದ್ದು ದೂರು ನೀಡಬೇಕು”

Spread the love

ಬೆಂಗಳೂರು, ಮಾ.14- ಸಾಮಾಜಿಕ ಜಾಲತಾಣಗಳ ವಿಡಿಯೋ ತುಣುಕುಗಳನ್ನಾಧರಿಸಿ ದೂರು ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡು ಜೀವಭಯವಿದೆ, ಭದ್ರತೆ ನೀಡುವಂತೆ ಗೃಹ ಸಚಿವರಿಗೆ ಮನವಿ ಮಾಡಿಕೊಂಡ ಹೇಳಿಕೆ ಆಧರಿಸಿ ದೂರು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಯಾವುದೇ ಒಬ್ಬ ವ್ಯಕ್ತಿ ತಮಗಾದ ಅನ್ಯಾಯದ ವಿರುದ್ಧ ದೂರು ನೀಡಬೇಕಾದರೆ ಪೊಲೀಸರೆದುರು ಖುದ್ದು ಹಾಜರಾಗಬೇಕು. ಇಲ್ಲವೆ ಅವರ ಕುಟುಂಬ ವರ್ಗದವರು ಅಥವಾ ಆಪ್ತರ ಬಳಿ ದೂರು ಕಳುಹಿಸಿ ಮಾಹಿತಿ ನೀಡಿದಾಗ ಮಾತ್ರ ದೂರು ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ.ಸಿಡಿ ಪ್ರಕರಣದಲ್ಲಿ ಯುವತಿ ಪೊಲೀಸರೆದುರು ಖುದ್ದು ಹಾಜರಾಗಿ ದೂರು ನೀಡಬೇಕು. ಇಲ್ಲವೆ ಅವರ ಕುಟುಂಬ ವರ್ಗದವರನ್ನು ಕಳುಹಿಸಿದರೆ ವಿಚಾರಣೆ ನಡೆಸಿ ದೂರು ದಾಖಲಿಸಿಕೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ