ಬೆಳಗಾವಿ: ಬೆಳಗಾವಿಯಲ್ಲಿರುವ ಶಿವಸೇನೆ ಕಚೇರಿಯನ್ನು ಬಂದ್ ಮಾಡುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಸದಸ್ಯರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶಿವಸೇನೆ ಬೋರ್ಡ್ ಹೊಂದಿರೋ ವಾಹನವನ್ನು ಜಪ್ತಿ ಮಾಡಬೇಕು ಹಾಗೂ ನಗರದಲ್ಲಿರುವ ಶಿವಸೇನೆ ಕಚೇರಿಯನ್ನು ಕೂಡಲೇ ಬಂದ್ ಮಾಡುವಂತೆ ಒತ್ತಾಯಿಸಿದರು.
ಮಹಾರಾಷ್ಟ್ರದಲ್ಲಿ ಕನ್ನಡ ನಾಮಫಲಕ ಹಾಕಲು, ಕನ್ನಡ ಸಂಘಟನೆಗಳು ಕಾರ್ಯನಿರ್ವಹಿಸಲು ಅವಕಾಶ ಕೊಡದೇ ಇರುವಾಗ, ನಿರಂತರವಾಗಿ ನಾಡವಿರೋಧಿ ಚಟುವಟಿಕೆ ನಡೆಸುವ ಶಿವಸೇನೆಗೆ ಬೆಳಗಾವಿಯಲ್ಲಿ ಕಚೇರಿ ಮುಂದುವರೆಸಲು ಅನುಮತಿ ನೀಡಬಾರದು ಎಂದು ಸಂಘಟನೆಯ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದರು.
Laxmi News 24×7