Breaking News

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ

Spread the love

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ನಲ್ಲಿ 2 ಬ್ಯಾಂಕ್ ಖಾಸಗೀಕರಣ ಮಾಡುವುದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್​ಗಳನ್ನು ಖಾಸಗೀಕರಣಕ್ಕೆ ಒಳಪಡಿಸಲು ಕೇಂದ್ರ ಯತ್ನಿಸಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈ ಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರುವುದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್​ಗಳು ಅಕ್ರಮ ಎಸಗಿವೆ ಎಂದು ಬ್ಯಾಂಕ್‌ ಯೂನಿಯನ್​ಗಳ ಸಂಯುಕ್ತ ವೇದಿಕೆ ಆರೋಪಿಸಿದೆ.

ಈ ನಿಟ್ಟಿನಲ್ಲಿ ಬ್ಯಾಂಕ್ ಖಾಸಗೀಕರಣದಿಂದ ವಿದೇಶಿ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್‌ ಯೂನಿಯನ್​ಗಳ ಸಂಯುಕ್ತ ವೇದಿಕೆ ಕರೆಕೊಟ್ಟಿದೆ.

ಮೈಸೂರಿನಲ್ಲಿ ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ:
ಮೈಸೂರಿನಲ್ಲೂ ಇಂದು ಮತ್ತು ನಾಳೆ ಬ್ಯಾಂಕ್‌ ನೌಕರರಿಂದ ಪ್ರತಿಭಟನೆ ನಡೆಯಲಿದ್ದು, ಬ್ಯಾಂಕ್‌ಗಳ ಖಾಸಗೀಕರಣಗೊಳಿಸುವ ತೀರ್ಮಾನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ 2 ದಿನಗಳ ಕಾಲ ಮುಷ್ಕರ ನಡೆಯಲಿದೆ. ಮೈಸೂರಿನ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್‌ಬಿಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್‌ನಿಂದ ಮೈಸೂರಿನ ಭಾರತೀಯ ಸ್ಟೇಟ್ ಬ್ಯಾಂಕ್ ವಲಯ ಕಛೇರಿ, ಟಿ ಕೆ ಬಡಾವಣೆಯ ಕೆನರಾ ಬ್ಯಾಂಕ್ ವಲಯ ಕಚೇರಿಯಲ್ಲಿ ಹಾಗೂ ನಜರ್​ಬಾದ್​ನ ವಲಯ ಕಚೇರಿಯ ಬಳಿ ಮುಷ್ಕರ ನಡೆಯುತ್ತಿದೆ.

ಹಾಸನದಲ್ಲಿ ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ:
ಸಾರ್ವಜನಿಕ ವಲಯದ ಬ್ಯಾಂಕ್​ಗಳ ಖಾಸಗೀಕರಣ ವಿರೋದಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಹಾಸನದಲ್ಲೂ ಬ್ಯಾಂಕ್ ಬಂದ್ ಮಾಡಿ ನೌಕರರು ಹೋರಾಟಕ್ಕಿಳಿದಿದ್ದಾರೆ.ಹಾಸನದ ಎಸ್​ಬಿಐ ಮುಖ್ಯಶಾಖೆ ಎದುರು ಬ್ಯಾಂಕ್​ಗಳ ಖಾಸಗೀಕರಣದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು,ಕೇಂದ್ರ ಸರ್ಕಾರ ಖಾಸಗೀಕರಣ ನೀತಿ ಕೈ ಬಿಡಲು ಒತ್ತಾಯ ಮಾಡಿದ್ದಾರೆ.

ಧಾರವಾಡದಲ್ಲಿ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳ ಪ್ರತಿಭಟನೆ:
ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ 2 ದಿನ ಮುಷ್ಕರ ನಡೆಯುತ್ತಿದ್ದು, ಧಾರವಾಡದ ಕಾಲೇಜು ರಸ್ತೆಯ ಎಸ್​ಬಿಐ ಕಚೇರಿ ಬಳಿ ಧರಣಿ ನಡೆಯುತ್ತಿದೆ. ಕೆಲಸ ಬಹಿಷ್ಕರಿಸಿ ನೂರಾರು ಬ್ಯಾಂಕ್ ಸಿಬ್ಬಂದಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ