ಹಾಸನ: ಮಹಾರಾಷ್ಟ್ರದಿಂದ ಹಾಸನಕ್ಕೆ ಹಿಂದಿರುಗಿದ ಏಳು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿಗೆ ಮಹಾರಾಷ್ಟ್ರದಿಂದ 289 ಮಂದಿ ವಾಪಾಸಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಷ್ಟೂ ಮಂದಿಯನ್ನು ಹೋಂ ಕ್ವಾರಂಟೀನ್ನಲ್ಲಿರಿಸಲಾಗಿತ್ತು. ಅಲ್ಲದೇ ಸ್ವಾಬ್ ತೆಗೆದು ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು.
ಈ ಪೈಕಿ ಏಳು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.