ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ವಿಡಿಯೋ ಸಂವಾದದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮುಂದಿನ ನಿಲುವುಗಳ ಬಗ್ಗೆ ಸ್ಪಷ್ಟನೆ ನೀಡಿದ್ದು, ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ .
ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸುವ ಯಾವುದೇ ಸಾಧ್ಯತೆ ಇಲ್ಲ. ರಾಜ್ಯದಲ್ಲಿ ಆರ್ ಟಿಪಿಎಸ್ ಪರೀಕ್ಷೆ ಪ್ರಮಾಣಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ ತಡೆ ಲಸಿಕೆಯನ್ನು ಪರಿಣಾಮಕಾರಿಯಾಗಿ ಬಳಸಬೇಕು , ವ್ಯರ್ಥವಾಗಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಇನ್ನು ಲಸಿಕೆಯ ಬಗ್ಗೆ ಮಾತನಾಡಿದ ಅವರು, ಲಸಿಕೆಯನ್ನು ಹೆಚ್ಚಿನ ಜನರಿಗೆ ನೀಡುವಂತೆ ಪ್ರಧಾನಿ ತಿಳಿಸಿದ್ದಾರೆ ಎಂದರು. ಹಾಗೆಯೇ, ಟೆಸ್ಟ್ , ಟ್ರೇಸ್ ಮತ್ತು ಟ್ರ್ಯಾಕ್ ಸೂತ್ರ ಅನುಸರಿಸುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅದರೊಂದಿಗೆ, ಬೆಂಗಳೂರಿನಲ್ಲಿ ಕೊರೋನಾ ಕೇರ್ ಸೆಂಟರ್ ಆರಂಭಿಸುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ .