Breaking News
Home / ರಾಜ್ಯ / ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ

ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ

Spread the love

ಬೆಂಗಳೂರು: ಕೋವಿಡ್ ನಿಯಂತ್ರಣ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿಯವರೇ, ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ’ ಎಂದು ಪ್ರಶ್ನಿಸಿದ್ದಾರೆ.

‘ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಬಿ.ಎಸ್. ಯಡಿಯೂರಪ್ಪ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ?’ ಎಂದು ಕುಟುಕಿದ್ದಾರೆ.

ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಇತ್ತೀಚೆಗೆ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿರುವ ಸಿಎಂ ಯಡಿಯೂರಪ್ಪ, ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ