Breaking News

ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಎಂದು ಗೊತ್ತಾಗಲಿದೆ: S.T.ಸೋಮಶೇಖರ್

Spread the love

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಮನೆ ಹಾಳು ಮಾಡಿದ ಮಹಾನ್ ನಾಯಕ‌ ಯಾರು ಎಂದು ತಿಳಿದುಕೊಳ್ಳುವ ಕುತೂಹಲ ರಾಜ್ಯಕ್ಕೆ ಇದೆ. ಅದರಲ್ಲಿ ನಾನು ಸಹಾ ಒಬ್ಬ. ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಎಂದು ಗೊತ್ತಾಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ ಮಹಾನ್ ನಾಯಕ ಹೇಳಿಕೆ ಬಗ್ಗೆ ಡಿ.ಕೆ. ಶಿವಕುಮಾರ್ ತಮ್ಮನ್ನೇ ಏಕೆ ಮುಟ್ಟಿಕೊಳ್ಳುತ್ತಿದ್ದಾರೆ. ಎಲ್ಲಾ ಪಕ್ಷದಲ್ಲೂ ಮಹಾನ್ ನಾಯಕರಿದ್ದಾರೆ. 10 ಮತ ಹಾಕಿಸುವವನೇ ಈಗ ಮಹಾನ್ ನಾಯಕನೇ. ಅದರಲ್ಲಿ ಇವರು ನಾವು ಅಂತಾ ಏಕೆ ಅಂದುಕೊಳ್ಳಬೇಕು ಎಂದು ಟೀಕಿಸಿದರು.

ಇಂತಹ ಸಿ.ಡಿ‌ ಮಾಡಿ ರಾಜ್ಯ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟಕ್ಕೆ ಹಂಚಿದ್ದಾರೆ. ಮನೆ ಮನಗಳನ್ನು ಮುರಿದಿದ್ದಾರೆ. ಇಂತಹ ಮನೆ ಮುರುಕ ಪುಣ್ಯಾತ್ಮ ಯಾರು ಅನ್ನೋದು ಗೊತ್ತಾಗಬೇಕಿದೆ ಎಂದರು.

 

ನ್ಯಾಯಾಲಯಕ್ಕೆ ಹೋದ ಸಚಿವರಿಂದ ಸದನದಲ್ಲಿ ಉತ್ತರ ಪಡೆಯುವುದಿಲ್ಲ ಎಂಬ ಕಾಂಗ್ರೆಸ್ ಪಕ್ಷದ ನಾಯಕರ ತೀರ್ಮಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ವೈಯಕ್ತಿಕ ತೇಜೋವಧೆ ತಪ್ಪಿಸಿಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದೆವು. ಈ ಹಿಂದೆ ಮೇಟಿ ಪ್ರಕರಣದಲ್ಲಿ ಅವರ ಮಾನ ಹರಾಜಾಯ್ತು. ಮನೆ ಮನಗಳು ಮುರಿದು ಹೋದವು. ಮಾನ ಮರ್ಯಾದೆ ಎಲ್ಲವೂ ಹೋಯಿತು. ಮೂರು ತಿಂಗಳ ನಂತರ ಅದು ನಕಲಿ ಸಿಡಿ ಎಂದು ಸಾಬೀತಾಗಿತ್ತು. ಆದರೆ ಹೋದ ಮಾನ ವಾಪಸ್ಸು ಬಂತೇ? ಇದೇ ಕಾರಣಕ್ಕೆ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದರು.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ