Breaking News

ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ

Spread the love

ವಿಜಯಪುರ: ರಾಜ್ಯ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ್ ಮತ್ತು ಕ್ಯಾಷಿಯರ್ ಚೈತನ್ಯ ಕುಮಾರ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಖೇಡಗಿ ಗ್ರಾಮದಲ್ಲಿರುವ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಇವರಿಬ್ಬರೂ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ