Breaking News

ಭಾರತದ ಪಾಲಿಗೆ ಇಂದು ಮತ್ತೊಂದು ಐತಿಹಾಸಿಕ ದಿನ – ವಾಯು, ನೌಕಾ ಸೇನೆಯಿಂದ ಹೆಲ್ತ್ ವಾರಿಯರ್ಸ್‌ಗೆ ಗೌರವ

Spread the love

ನವದೆಹಲಿ: ನಮ್ಮನ್ನು ರಕ್ಷಿಸಲು, ಕೊರೊನಾ ಹಿಮ್ಮೆಟ್ಟಿಸಲು ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಹೆಲ್ತ್ ವಾರಿಯರ್ಸ್‌ಗೆ ಈಗಾಗಲೇ ಚಪ್ಪಾಳೆ ತಟ್ಟುವ ಮೂಲಕ ಜನರು ಗೌರವ ಸಲ್ಲಿಸಿದ್ದಾರೆ. ಆದರೆ ಇಂದು ಇಡೀ ದೇಶವನ್ನೇ ಕಾಯುವ ಮೂರು ಸೇನೆಗಳು ಹೆಲ್ತ್ ವಾರಿಯರ್ಸ್‌ಗೆ ವಿಶೇಷ ಗೌರವ ಸಲ್ಲಿಸಲು ಮುಂದಾಗಿವೆ.

ಉತ್ತರ ಧ್ರುವದಿಮ್ ದಕ್ಷಿಣ ಧ್ರುವದವರೆಗೆ ಹೆಲಿಕಾಪ್ಟರ್‌ನಿಂದ ಹೂಮಳೆ

ಈ ಬಾರಿ ಸಾಮಾನ್ಯ ಜನರ ಬದಲು, ಇಡೀ ದೇಶವನ್ನು ಫುಲ್ ಟೈಂ ಕಾಯುವ ಮೂರು ಸೇನೆಗಳು ಹೆಲ್ತ್ ವಾರಿಯರ್ಸ್‌ಗೆ ಗೌರವ ಸಲ್ಲಿಸಲು ಮುಂದಾಗಿದೆ. ಭೂಸೇನೆ, ವಾಯುಸೇನೆ ಹಾಗೂ ನೌಕಾ ಸೇನೆ ಇಂದು ದೇಶದ ಎಲ್ಲ ಹೆಲ್ತ್ ವಾರಿಯರ್ಸ್‌ಗೆ ಗೌರವ ಸಲ್ಲಿಸಲಿದೆ.

ಶ್ರೀನಗರದಿಂದ ತಿರುವನಂತಪುರಂವರೆಗೆ ಹಾಗೂ ಅಸ್ಸಾಂನ ದಿಬ್ರುಗಡ್‍ದಿಂದ ಗುಜರಾತ್‍ನ ಕಛ್‍ವರೆಗೆ ಹೆಲಿಕಾಪ್ಟರ್‌ನಿಂದ ಹೂವಿನ ಮಳೆ ಸುರಿಯುವ ಮೂಲಕ ವಾಯುಸೇನೆ ಗೌರವ ಸಲ್ಲಿಸಲಾಗುತ್ತದೆ. ಇನ್ನೂ ಎಲ್ಲ ನೌಕಾ ನೆಲೆಗಳಲ್ಲಿ ದೀಪ ಹಚ್ಚಿ ಮೌಂಟೇನ್ ಬ್ಯಾಂಡ್ ನುಡಿಸುವ ಮೂಲಕ ಗೌರವ ಸಲ್ಲಿಸಲು ಭಾರತೀಯ ಸೇನೆ ಸಿದ್ಧವಾಗಿದೆ ಎಂದು 3 ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ತಿಳಿಸಿದ್ದಾರೆ.

ಇಂದಿನ ಐತಿಹಾಸಿಕ ಕಾರ್ಯಕ್ರಮದ ಪ್ರಮುಖಕಾಂಶಗಳೇನು?
* ಬೆಳಗ್ಗೆ 9 ಗಂಟೆಗೆ ದೆಹಲಿಯ ಪೊಲೀಸ್ ಯುದ್ಧ ಮೆಮೊರಿಯಲ್ ಮೇಲೆ ಪುಷ್ಪವೃಷ್ಟಿ
* ಬೆಳಗ್ಗೆ 10-10:30 ನಡುವೆ ದೆಹಲಿ ವಿವಿಧ ಕೊರೊನಾ ಆಸ್ಪತ್ರೆಗಳ ಮೇಲೆ ಹೂಮಳೆ
* ದೆಹಲಿ ಏಮ್ಸ್, ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ಲೋಕನಾಯಕ್ ಆಸ್ಪತ್ರೆ, ಆರ್.ಎಂ.ಎಲ್, ಸಬ್ದರ್‍ಜಂಗ್, ಗಂಗಾ ರಾಮ್, ಬಾಬಾ ಸಾಹೇಬ್ ಅಂಬೇಡ್ಕರ್ ಮ್ಯಾಕ್ಸ್ ಸಾಕೇತ್, ರೋಹಿನಿ, ಅಪೋಲೋ, ಇಂದ್ರಪ್ರಸ್ಥ, ಸೇನಾ ಆಸ್ಪತ್ರೆ ಮೇಲೆ ಹೂಮಳೆ


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ