Breaking News

ಇಂದು ಮಸ್ಕಿಯಲ್ಲಿ ಸಿಎಂ ಬಿಎಸ್​ವೈ ಸಮಾವೇಶ-ಸಂಭಾವ್ಯ ಅಭ್ಯರ್ಥಿಗಳನ್ನೂ ವರಿಷ್ಠರಿಗೆ ಶಿಫಾರಸ್ಸು ಮಾಡುವ ನಿರೀಕ್ಷೆ|

Spread the love

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉಪ ಚುನಾವಣೆಗಳ ಕಹಳೆ ಮೊಳಗಿದೆ. ಈಗಾಗಲೇ ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಅಂತಿಮವಾಗಿದ್ದು, ಬಿರುಸಿನ ಪ್ರಚಾರ ನಡೆದಿದೆ.

ಉಪಚುನಾವಣೆಯಲ್ಲಿ ಗೆಲುವಿಗಾಗಿ ಉಭಯ ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿವೆ. ಇಂದು ರಾಯಚೂರಿನ ಮಸ್ಕಿಯಲ್ಲಿ ಬೃಹತ್ ಸಮಾವೇಶ ನಡೆಸಲಿದೆ. ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿ ಪ್ರತಾಪಗೌಡ ಪಾಟೀಲ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಇತ್ತ ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ರಾಜ್ಯ ಬಿಜೆಪಿ ಕೋರ್​​​​ ಕಮಿಟಿಯಿಂದ ಸಭೆ ನಡಸಲಿದೆ. ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನೂ ವರಿಷ್ಠರಿಗೆ ಶಿಫಾರಸ್ಸು ಮಾಡುವ ನಿರೀಕ್ಷೆ ಇದೆ.

ಬೆಳಗ್ಗೆ 8.30ಕ್ಕೆ ಬಿಜೆಪಿ ಕಚೇರಿಯಲ್ಲಿ ಕೋರ್​​​ ಕಮಿಟಿ ಸಭೆ ನಡೆಯಲಿದ್ದು, ಮೂರು ಕ್ಷೇತ್ರಗಳ ಪೈಕಿ ಮಸ್ಕಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದ್ದು, ಸಭೆಯಲ್ಲಿ ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಕಾಂಗ್ರೆಸ್ ಹಿರಿಯ ಮುಖಂಡರು ಕೂಡ ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಸಲಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ