Breaking News

ಲಾಕ್‌ಡೌನ್‌ನ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಆರ್. ಆಶೋಕ್

Spread the love

(ಹುಬ್ಬಳ್ಳಿ): ರಾಜ್ಯದಲ್ಲಿ ನಾವು ಕೋವಿಡ್ ನಡುವೆಯೂ ಬದುಕಬೇಕಿದೆ. ಹೀಗಾಗಿ ಸುರಕ್ಷತಾ ಅಂತರ ಕಾಪಾಡಿಕೊಂಡು ಹೋಗಬೇಕಿದೆ. ಲಾಕ್ ಡೌನ್ ಹಾಗೂ ಸೆಮಿ ಲಾಕ್ ಡೌನ್‌ನ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಶನಿವಾರ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಅವರು ಭಾನುವಾರ ಬೆಳಿಗ್ಗೆ ಹಿರೇ‌ಕೆರೆಯಲ್ಲಿ ವಾಯುವಿಹಾರ ಮಾಡುತ್ತಾ, ಉತ್ತರ ಕರ್ನಾಟಕದ‌ ಜನರ ಸಂಭ್ರಮವೇ‌ ನನ್ನ ‌ಉತ್ಸಾಹ ಹೆಚ್ಚಿಸಿದೆ ಎಂದರು.

ಗ್ರಾಮದಲ್ಲಿ ಮೋಡಕವಿದ‌ ವಾತಾವರಣವಿದ್ದು, ಮಲೆನಾಡಿದಂತೆ ಭಾಸವಾಗುತ್ತಿದೆ. ಇಲ್ಲಿನ ವಾತಾವರಣ ‌ನೋಡಿದರೆ ಹುಬ್ಬಳ್ಳಿಯಲ್ಲಿ ಇದ್ದೇನೆ ಅನಿಸುವುದೇ ಇಲ್ಲ. ಅಧಿಕಾರಿಗಳು-ಜನರ‌ ನಡುವಿನ ಕಂದಕ ಕಡಿಮೆ ಮಾಡುವುದು ಗ್ರಾಮ ವಾಸ್ತವ್ಯದ ಮೂಲ ಉದ್ದೇಶ ಎಂದು ಸಚಿವರು ತಿಳಿಸಿದರು


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ