Breaking News
Home / Uncategorized / ಬಿಎಸ್‍ವೈ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಬಿಜೆಪಿ ಸೋಲು : ಯತ್ನಾಳ

ಬಿಎಸ್‍ವೈ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಬಿಜೆಪಿ ಸೋಲು : ಯತ್ನಾಳ

Spread the love

ವಿಜಯಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆತೃತ್ವದಲ್ಲಿ ಚುನಾವಣೆ ಎದರುಸಿದಲ್ಲಿ ಬಿಜೆಪಿ ಪಕ್ಷಕ್ಕೆ ಸೋಲು ಖಚಿತ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕಾಗಿ ಸಿ.ಎಂ. ಬದಲಾವಣೆ ಅನಿವಾರ್ಯ ಎಂದು ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.

ಶನಿವಾರ ನಗರದಲ್ಲಿ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ತಡೊಗಿರುವ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯಲೇಬೇಕು. ಬಿಜೆಪಿ ಉಳಿಬೇಕಿದ್ದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿ.ಎಂ. ಬಚಲಾವಣೆ ನೂರಕ್ಕೆ ನೂರರಷ್ಟು ಖಚಿತ. ಭ್ರಷ್ಟಾಚಾರ ಹಾಗೂ ವಂಶವಾದದ ವಿರುದ್ಧ ಮಾತನಾಡಿದ ನನಗೆ ಪಕ್ಷ ನೀಡಿದ ನೋಟೀಸ್‍ಗೆ ಉತ್ತರಿಸಿ ಒಂದೂವರೆ ತಿಂಗಳಾದರೂ ಯಾವ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ನಾನು ಪದೇ ಪದೇ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ನನಗೆ ಆದರ್ಶ. ಅವರ ಹೆಸರು ತೆಗೆದುಕೊಂಡು ಮಾತನಾಡಲು ಭ್ರಷ್ಟಾಚಾರ ರಹಿತವಾದ ಅವರ ರಾಜಕೀಯ ಜೀವನ ಮಾದರಿಯಾಗಿದ್ದು, ಪದೇ ಪದೇ ಅವರ ಹೆಸರು ಬಳಸುತ್ತೇನೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಹೆಸರು ತೆಗೆದುಕೊಂಡು ಮಾತನಾಡಲಾದೀತೆ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ