Breaking News

ಸಾರಿಗೆ ನೌಕರರಿಗೆ ಶೀಘ್ರ 6ನೇ ವೇತನ ಆಯೋಗದ ಸೌಲಭ್ಯ: ಲಕ್ಷ್ಮಣ ಸವದಿ ಭರವಸೆ

Spread the love

ಹೊಳಲ್ಕೆರೆ: ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಸೌಲಭ್ಯಗಳನ್ನು ಶೀಘ್ರವೇ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು.

ತಾಲ್ಲೂಕಿನ ಬಸಾಪುರ ಗೇಟ್‌ನಲ್ಲಿ ಭಾನುವಾರ ₹ 16 ಕೋಟಿ ವೆಚ್ಚದ ಕೆಎಸ್‌ಆರ್‌ಟಿಸಿ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ₹ 9 ಕೋಟಿ ವೆಚ್ಚದ ಬಸ್ ಡಿಪೊ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕೊರೊನಾ ಸಂಕಷ್ಟ ಕಾಲದಲ್ಲೂ ಸರ್ಕಾರದಿಂದ ₹ 1,900 ಕೋಟಿ ಹಣ ಪಡೆದು ಎಲ್ಲಾ ನೌಕರರಿಗೆ ವೇತನ ನೀಡಿದ್ದೇವೆ. ಆದರೂ ಕೆಲವರ ಮಾತು ಕಟ್ಟಿಕೊಂಡು ಮುಷ್ಕರ ನಡೆಸಿದರು. ಮುಷ್ಕರದ ವೇಳೆ ನಮ್ಮ ನೌಕರರೇ ಬಸ್‌ಗಳಿಗೆ ಕಲ್ಲು ಹೊಡೆದದ್ದು ನೋವು ತಂದಿತ್ತು. ಸರ್ಕಾರ ಮತ್ತು ನೌಕರರು ಒಂದು ಕುಟುಂಬದ ಸದಸ್ಯರಿದ್ದಂತೆ. ನಮ್ಮವರೇ ನಮ್ಮ ಮನೆಗೆ ಬೆಂಕಿ ಇಡಲು ಮುಂದಾದರೆ ಹೇಗೆ’ ಎಂದು ಪ್ರಶ್ನಿಸಿದರು.

‘ಮತ್ತೆ ಏಪ್ರಿಲ್‌ 7ರಿಂದ ಮುಷ್ಕರ ನಡೆಸುವುದಾಗಿ ನೋಟಿಸ್ ನೀಡಿದ್ದಾರೆ. ಸಾರಿಗೆ ನೌಕರರ 10 ಬೇಡಿಕೆಗಳಲ್ಲಿ 9ನ್ನು ಈಡೇರಿಸಿ ಆದೇಶ ಹೊರಡಿಸಲಾಗಿದೆ. ಯಾರದೋ ಕುಮ್ಮಕ್ಕಿನಿಂದ ಮುಷ್ಕರಕ್ಕೆ ಮುಂದಾದರೆ ತೊಂದರೆಗೆ ಸಿಲುಕುತ್ತೀರಿ. ಸರ್ಕಾರ ನಾಲ್ಕೂ ನಿಗಮಗಳ ನೌಕರರ ಹಿತ ಕಾಯಲು ಬದ್ಧ’ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ