ಕೊರೊನಾ ಎರಡನೇ ಅಲೆ ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಆದೇಶ ಹೊರಡಿಸಿದ್ದಾರೆ.
ಆ ಮೂಲಕ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸೇವಾವಧಿಯನ್ನು 01.04.2021 ರಿಂದ ಅನ್ವಯವಾಗುವಂತೆ 6 ತಿಂಗಳವರೆಗೆ ಅಂದರೆ 30.09.2021 ರವರೆಗೆ ವಿಸ್ತರಿಸಲಾಗಿದೆ.
ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸೇವಾವಧಿಯನ್ನು 01.04.2021 ರಿಂದ ಅನ್ವಯವಾಗುವಂತೆ 6 ತಿಂಗಳವರೆಗೆ ಅಂದರೆ 30.09.2021 ರವರೆಗೆ ವಿಸ್ತರಿಸಲಾಗಿದೆ.@DHFWKA pic.twitter.com/vo7ZbZY1k6
— Dr Sudhakar K (@mla_sudhakar) March 20, 2021