Breaking News
Home / ಜಿಲ್ಲೆ / ಬಿಜಾಪುರ / ವಿಜಯಪುರ : ಚಿಂದಿ ಆಯುವ ವಿವಾಹಿತೆ ಮೇಲೆ ಮೂವರಿಂದ ಅತ್ಯಾಚಾರಕ್ಕೆ ಯತ್ನ

ವಿಜಯಪುರ : ಚಿಂದಿ ಆಯುವ ವಿವಾಹಿತೆ ಮೇಲೆ ಮೂವರಿಂದ ಅತ್ಯಾಚಾರಕ್ಕೆ ಯತ್ನ

Spread the love

ವಿಜಯಪುರ : ಚಿಂದಿ ಹಾಗೂ ಹಂದಿ ಗೊಬ್ಬರ ಸಂಗ್ರಹಿಸಿ ಜೀವನ ನಡರಸುತ್ತಿದ್ದ 23 ವರ್ಷದ ಗೃಹಿಣಿ ಮೇಲೆ ಮೂವರು ಕಾಮಾಂಧರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ವರದಿಯಾಗಿದೆ.

ಮುದ್ದೇಬಿಹಾಳ ಪಟ್ಟಣದಲ್ಲಿ ಚಿಂದಿ, ಹಂದಿ ಗೊಬ್ಬರ ಆಯ್ದು ಜೀವನ‌ನಡೆಸುತ್ತಿರುವ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರನ್ನು ಗುರುತಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಅತ್ಯಾಚಾರಕ್ಕೆ ಯತ್ನಿಸಿದವರನ್ನು ಅಕ್ಬರ್ ಮಕಾನದಾರ, ಸಲೀಮ ನದಾಫ, ಸೋಯೆಲ್ ಹಡಗಲಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಭಾನುವಾರ ನಸುಕಿನಲ್ಲಿ ಸೂರ್ಯೋದಯಕ್ಕೆ ಮುನ್ನ ಕತ್ತಲೆ ಇರುವಾಗಲೇ ಸದರಿ ಮಹಿಳೆ ಚಿಂದಿ ಆಯುವ ಕೆಲಸಕ್ಕೆ‌ ಮುಂದಾಗಿದ್ದಳು.

ಈ ಹಂತದಲ್ಲಿ ಮಹಿಳೆಯನ್ನು ಹಿಂಬಾಲಿಸಿ ಬಂದ ಆರೋಪಿಗಳು, ಆಕೆಯ ಕೈ ಹಿಡಿದು ಎಳೆದಾಡಿ, ಮಾನಭಂಗಕ್ಕೆ ಯತ್ನಿಸಿದ್ದಾರೆ. ಮಹಿಳೆ ಆಕ್ಷೇಪಿಸಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ.

ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಮುದ್ದೇಬಿಹಾಳ ಠಾಣೆ ಪೊಲೀಸರು, ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ