Breaking News
Home / ರಾಜಕೀಯ / ವಿಧಾನ ಪರಿಷತ್ ನಲ್ಲಿ ಮುಂದುವರಿದ ಗದ್ದಲ: ಸದನದ ಸಮಿತಿ ರಚಿಸಲು ಪ್ರತಿಪಕ್ಷ ಪಟ್ಟು

ವಿಧಾನ ಪರಿಷತ್ ನಲ್ಲಿ ಮುಂದುವರಿದ ಗದ್ದಲ: ಸದನದ ಸಮಿತಿ ರಚಿಸಲು ಪ್ರತಿಪಕ್ಷ ಪಟ್ಟು

Spread the love

ವಿಧಾನ ಪರಿಷತ್: ರಾಜ್ಯದ ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿರುವುದರಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ತನಿಖೆಗೆ ಸದನ ಸಮಿತಿ ರಚಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಧರಣಿ ಮುಂದುವರಿಸಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರೂ ಜೆಡಿಎಸ್ ಸದಸ್ಯರು ಒಪ್ಪಲಿಲ್ಲ. ಸದನ ಸಮಿತಿ ರಚಿಸಲೇ ಬೇಕು ಎಂದು ಪಟ್ಟು ಹಿಡಿದರು.

ಈ ವೇಳೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಮತ್ತು ಜೆಡಿಎಸ್ ನಾಯಕರ ಜೊತೆ ಸಭೆ ನಡೆಸಿ ಸಹಮತಕ್ಕೆ‌ ಬರಲು ಚರ್ಚೆಗೆ ಆಹ್ವಾನಿಸಿದರು. ಹೀಗಾಗಿ ಸಭೆಯನ್ನು 10 ನಿಮಿಷ ಮುಂದೂಡುವುದಾಗಿ ಪ್ರಕಟಿಸಿದರು.

ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಪೀಠದ ಮುಂಭಾಗದಲ್ಲಿ ಜೆಡಿಎಸ್ ಸದಸ್ಯರು ಧರಣಿ ಆರಂಭಿಸಿದರು. ಸದನ ಸಮಿತಿ ರಚಿಸಲೇಬೇಕು ಎಂದು ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಆಗ್ರಹಿಸಿದರು.

 

ತಜ್ಞರ ಸಮಿತಿಯಿಂದ ತನಿಖೆ ನಡೆಸಲಾಗುವುದು. ಭ್ರಷ್ಟಾಚಾರ ನಡೆದಿರುವುದಕ್ಕೆ ದಾಖಲೆ ನೀಡಲಿ. ಲೋಪ ಎಲ್ಲಿ ಆಗಿದೆ ಎಂದು ಹೇಳಲಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರೂ ಜೆಡಿಎಸ್ ಸದಸ್ಯರು ಒಪ್ಪಲಿಲ್ಲ. ‌ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಜೆಡಿಎಸ್ ಸದಸ್ಯರ ಬೇಡಿಕೆಯನ್ನು ಬೆಂಬಲಿಸಿದರು. ಸರ್ಕಾರ ಪ್ರತಿಷ್ಟೆಯಾಗಿ ತೆಗೆದುಕೊಳ್ಳದೆ ಸದನ ಸಮಿತಿ ರಚಿಸುವಂತೆ ಸಲಹೆ ನೀಡಿದರು.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ