Breaking News
Home / ರಾಜ್ಯ / ಬಾಂಬೆ ತಂಡ’ದ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ ಯಡಿಯೂರಪ್ಪನವರೇ? ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಬಾಂಬೆ ತಂಡ’ದ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ ಯಡಿಯೂರಪ್ಪನವರೇ? ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

Spread the love

ಬೆಂಗಳೂರು : ಮಸ್ಕಿಯಲ್ಲಿ ಶಾಸಕರಾಗಿರುವ ಮಹಾತ್ಯಾಗದಿಂದ ಬಿಎಸ್‌ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈ ವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ, ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಹೇಳಿರುವುದು ಗಮನಕ್ಕೆ ಬಂತು. ಬಿಎಸ್‌ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈ ವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ? ಎಂದು ಪ್ರಶ್ನಿಸಿದ್ದಾರೆ.

ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆಗಳಾದ ‘ಬಾಂಬೆ ತಂಡ’ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು ಎಂದು ನಿಮಗಾದರೂ ಅನಿಸದೇ? ಟ್ವೀಟ್ ಮಾಡಿದ್ದಾರೆ.

ಮಸ್ಕಿ ಕ್ಷೇತ್ರವಿರಲಿ, ಬೇರಾವ ಕ್ಷೇತ್ರವೇ ಆಗಿರಲಿ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ? ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ ನಿಮ್ಮ ಸರ್ಕಾರದಲ್ಲಿರುವ ‘ಏಕಗವಾಕ್ಷಿ’ಗೆ ಆಪೋಷನವಾಗುತ್ತಿಲ್ಲವೇ? ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ ‘ಏಕಗವಾಕ್ಷಿ’ ಆಡುವ ಮಾತುಗಳಿಗೆ ಜನ ಮನ್ನಣೆ ನೀಡಬಾರದು ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ