Breaking News
Home / ಕಾರವಾರ / ಹುತಾತ್ಮರ ದಿನಾಚರಣೆಯಂದೇ ರಕ್ತದಾನ

ಹುತಾತ್ಮರ ದಿನಾಚರಣೆಯಂದೇ ರಕ್ತದಾನ

Spread the love

ಕಾರವಾರ: ಹುತಾತ್ಮ ದಿನದ ಪ್ರಯುಕ್ತ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಜಿಲ್ಲಾ ಘಟಕ ಕಾರವಾರ, ನಿಫಾ, ಕ್ರಿಮ್ಸ್‌ ಕಾರವಾರ, ಪಹರೆ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದೇಶಾದ್ಯಂತ ನಡೆದ ರಕ್ತದಾನದ ಕಾರ್ಯಕ್ರಮ ಜಿಲ್ಲಾ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ನೇತೃತ್ವದಲ್ಲಿ ನಡೆಯಿತು.

ಡಿಸಿ ಮುಲ್ಲೈ ಮುಹಿಲನ್‌ ಅಧ್ಯಕ್ಷತೆ ವಹಿಸಿ ಇಂದು ರೆಡ್‌ಕ್ರಾಸ್‌ ಸಂಸ್ಥೆ ಜಗತ್ತಿನಾದ್ಯಾಂತ ಅತ್ಯಂತ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿನಾದ್ಯಂತ ರಕ್ತದ ಅವಶ್ಯಕತೆ ಆಸ್ಪತ್ರೆಗಳಲ್ಲಿ ಹೆಚ್ಚುತ್ತಿದ್ದುಅದನ್ನು ಪೂರೈಸುವತ್ತ ರೆಡ್‌ಕ್ರಾಸ್‌ ಪಾತ್ರ ಅತ್ಯಂತ ಮಹತ್ವದ್ದು ಎಂದರು.

ದಾನಿಗಳು ರಕ್ತದಾನ ಮಾಡಲು ಸ್ವಯಂ ಪ್ರೇರಿತವಾಗಿ ಜಾತಿ ಮತಗಳ ಭೇದವೆಣಿಸದೆಮುಂದೆ ಬರಬೇಕು ಎಂದು ಕರೆ ನೀಡಿದರು.ಕ್ರಿಮ್ಸ್‌ ನಿರ್ದೇಶಕ ಡಾ| ಗಜಾನನನಾಯ್ಕ ರಕ್ತದಾನದ ಮಹತ್ವ ಹಾಗೂ ಇಂದುಹೆಚ್ಚುತ್ತಿರುವ ಜನಸಂಖ್ಯೆಯಿಂದ ರಕ್ತದ ಬೇಡಿಕೆಗಣನೀಯವಾಗಿ ಹೆಚ್ಚುತ್ತಿದ್ದು ಜಗತ್ತಿನಲ್ಲಿಪ್ರಯೋಗಾಲಯಗಳಲ್ಲಿ ಉತ್ಪಾದಿಸಲುಸಾಧ್ಯವಾಗದ ಏಕೈಕ ವಸ್ತು ಎಂದರೆ ರಕ್ತ.ಹೀಗಾಗಿ ರಕ್ತದಾನದ ಅವಶ್ಯಕತೆಯನ್ನುಎಲ್ಲರೂ ತಿಳಿದುಕೊಳ್ಳಬೇಕು ಎಂದರು.

ರಕ್ತದಾನದ ಕುರಿತಾಗಿ ಸಾರ್ವಜನಿಕರಲ್ಲಿಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಕರೆ ನೀಡಿದರು. ಪಹರೆ ವೇದಿಕೆ ಸಂಚಾಲಕ ನಾಗರಾಜ ನಾಯಕ, ಯುವಕರು ರಕ್ತದಾನದಲ್ಲಿಸಕ್ರಿಯವಾಗಿ ಪಾಲ್ಗೊಳ್ಳುವದರ ಮುಖಾಂತರಸಮಾಜಕ್ಕೆ ನೆರವಾಗಬೇಕೆಂದು ಕರೆ ನೀಡಿದರು.

ಜಿಲ್ಲಾ ಸಂಚಾರಿ ಪೊಲೀಸ್‌, ಡಿಎಆರ್‌,ಪಹರೆ ವೇದಿಕೆ, ನಾಗಾರ್ಜುನ ಕನ್ಸ್‌ಟ್ರಕ್ಷನ್‌, ಬ್ಲಿಡ್‌ಡೋನರ್ಸ್‌ ಗ್ರೂಪ್‌ಕಾರವಾರ, ವೈದ್ಯಕೀಯ ಕಾಲೇಜಿನವಿದ್ಯಾರ್ಥಿಗಳು ಹಾಗೂ ಜನಶಕ್ತಿ ವೇದಿಕೆಇವರು ಸಂಪೂರ್ಣವಾಗಿ ಸಹಕರಿಸಿದರು.ಸಾರ್ವಜನಿಕರು ಹಾಗೂ ಯುವಕರು ರಕ್ತದಾನದಲ್ಲಿ ಉತ್ಸಾಹದಲ್ಲಿ ಭಾಗವಹಿಸಿದ್ದು ವಿಷೇಶವಾಗಿತ್ತು. ರಕ್ತದಾನದಲ್ಲಿ ಕೇಂದ್ರದವೈದ್ಯೆ ಡಾ| ಮೇಘಾ ಹಾಗೂ ಸಿಬ್ಬಂದಿ ಸಹಕರಿಸಿದರು. ಅಧ್ಯಕ್ಷ ವಿ.ಎಂ. ಹೆಗಡೆ ಸ್ವಾಗತಿಸಿದರು. ಸಂಸ್ಥೆಯ ಕಾರ್ಯದರ್ಶಿ ಜಗದೀಶ ಬಿರ್ಕೊಡಿಕರ ವಂದಿಸಿದರು.


Spread the love

About Laxminews 24x7

Check Also

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

Spread the loveನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ