Breaking News

ದರ್ಶನ್‌-ಸುದೀಪ್‌ ಒಂದಾಗಬೇಕು: ಸೋಶಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳ ಅಭಿಯಾನ

Spread the love

ನಟ ದರ್ಶನ್‌ ಹಾಗೂ ಸುದೀಪ್‌ ಒಂದು ಸಮಯದಲ್ಲಿ ಕುಚುಕು ಗೆಳೆಯರಾಗಿದಿದ್ದು ನಿಮಗೆ ಗೊತ್ತೇ ಇದೆ. ಆ ನಂತರ ಇಬ್ಬರ ನಡುವೆ ಮುನಿಸು ಬಂದು ಈಗ ದೂರವಾಗಿದ್ದಾರೆ. ಆದರೆ, ಈಗ ಅವರ ಅಭಿಮಾನಿಗಳು ಅವರಿಬ್ಬರು ಮತ್ತೆ ಒಂದಾಗ ಬೇಕೆಂದು ಬಯಸಿದ್ದಾರೆ. ಇದರ ಪರಿಣಾಮವಾಗಿ ಅಭಿಮಾನಿಗಳು ಟ್ವೀಟರ್‌ನಲ್ಲಿ ಒಂದು ಅಭಿಯಾನ ವನ್ನೇ ಆರಂಭಿಸಿದ್ದಾರೆ.

#DbossKicchaComeTogether ಅಭಿಯಾನದಡಿ ಅವರ ಅಭಿಮಾನಿಗಳು ಟ್ವೀಟ್‌ ಮಾಡಿದ್ದಾರೆ. ಜೊತೆಗೆ ದರ್ಶನ್‌ ಸುದೀಪ್‌ ಜೊತೆಗಿರುವ ಸಿಡಿಪಿಯೊಂದನ್ನು ಕೂಡಾ ಬಿಡುಗಡೆ ಮಾಡಿದ್ದಾರೆ. ಈ ಇಬ್ಬರು ಒಟ್ಟಾಗುವು ದರಿಂದ ವೈಯಕ್ತಿಕವಲ್ಲದೇ ಕನ್ನಡ ಚಿತ್ರರಂಗಕ್ಕೆ ಇದರಿಂದ ಲಾಭವಿದೆ ಎಂದು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಈ ಅಭಿಯಾನ ದೊಡ್ಡ ಮಟ್ಟ ತಲುಪುವ ಸಾಧ್ಯತೆ ಇದೆ. ದರ್ಶನ್‌ ಹಾಗೂ ಸುದೀಪ್‌ ಬೇರೆ ಬೇರೆಯಾಗಿ ನಾಲ್ಕು ವರ್ಷಗಳಾಗಿವೆ. ಅವತ್ತಿನಿಂದಲೂ ಅವರ ಅಭಿಮಾನಿಗಳು ಈ ಇಬ್ಬರು ಮತ್ತೆ ಒಂದಾಗಬೇಕು ಎಂದು ಆಸೆ ಪಡುತ್ತಲೇ ಬಂದಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ