Breaking News

CD ಯುವತಿಯಿಂದ ಮತ್ತೊಂದು ವಿಡಿಯೋ.. ಸಿದ್ದರಾಮಯ್ಯ, ಡಿಕೆಶಿ ಹೆಸರು ಉಲ್ಲೇಖ

Spread the love

ರಮೇಶ್ ಜಾರಕಿಹೊಳಿ ವಿಡಿಯೋದಲ್ಲಿರೋ ಯುವತಿ ಇವತ್ತು ಮತ್ತೊಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾಳೆ. ಅದರಲ್ಲಿ ತನ್ನ ತಂದೆ, ತಾಯಿಗೆ ರಕ್ಷಣೆ ಕೊಡಿ ಅಂತ ವಿಪಕ್ಷ ನಾಯಕರ ಬಳಿ ಕೇಳಿಕೊಂಡಿದ್ದಾಳೆ. ಜೊತೆಗೆ ಎಸ್​ಐಟಿ ತನಿಖೆ ಬಗ್ಗೆನೇ ಅನುಮಾನ ವ್ಯಕ್ತಪಡಿಸಿದ್ದಾಳೆ. ಆಕೆ ವಿಡಿಯೋದಲ್ಲಿ ಹೇಳಿರೋದೇನು ಅನ್ನೋದು ಇಲ್ಲಿದೆ ನೋಡಿ..

ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅದರ ಬಗ್ಗೆ ಗ್ಯಾರಂಟಿ ಸಿಕ್ಕ ಬಳಿಕ ಎಸ್​ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ಏನು ಹೇಳಿಕೆ ನೀಡಬೇಕೋ ಅದನ್ನ ನೀಡುತ್ತೇನೆ. ಅದಕ್ಕೂ ಮೊದಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ರಮೇಶ್​ ಕುಮಾರ್, ಮಹಿಳಾ ಸಂಘಟನೆಗಳಿಗೆ ನಾನು ಕೇಳಿಕೊಳ್ಳೋದು ಏನು ಅಂದ್ರೆ, ನನ್ನ ತಂದೆ, ತಾಯಿಗೆ ರಕ್ಷಣೆ ಕೊಡಿ.

ಎರಡು ದಿನದಿಂದ ನನಗೆ ನ್ಯಾಯ ಸಿಗುತ್ತೆ ಅನ್ನೋ ನಿರೀಕ್ಷೆ ಹುಟ್ಟಿದೆ. ಮಾರ್ಚ್ 12ನೇ ತಾರೀಖು ಬೆಂಗಳೂರು ಕಮಿಷನರ್ ಮತ್ತು ತನಿಖಾ ತಂಡಕ್ಕೆ ನನ್ನ ವಿಡಿಯೋ ಕಳಿಸಿಕೊಟ್ಟಿದ್ದೆ. ಆದ್ರೆ ಅದನ್ನ ಅವತ್ತು ರಿಲೀಸ್ ಮಾಡಲಿಲ್ಲ. ಮಾರ್ಚ್​ 13ನೇ ತಾರೀಖು ರಮೇಶ್ ಜಾರಕಿಹೊಳಿ ದೂರು ಕೊಡ್ತಾರೆ. ಅದಾಗಿ ಅರ್ಧಗಂಟೆಯಲ್ಲಿ ನನ್ನ ವಿಡಿಯೋ ರಿಲೀಸ್ ಮಾಡ್ತಾರೆ. ಇದನ್ನ ನೋಡಿದ್ರೆ ಎಸ್​ಐಟಿ ಯಾರ ಪರವಾಗಿದೆ? ಯಾರನ್ನ ಸೇಫ್ ಮಾಡ್ತಿದ್ದಾರೆ? ಅಂತ ಗೊತ್ತಾಗ್ತಿಲ್ಲ.

ನಾನು ಕಿಡ್ನಾಪ್ ಆಗಿದ್ದೇನೆ ಅಂತ ನನ್ನ ತಂದೆ, ತಾಯಿ ಸ್ವಇಚ್ಛೆಯಿಂದ ದೂರು ಕೊಡಲು ಸಾಧ್ಯವೇ ಇಲ್ಲ. ಯಾಕಂದ್ರೆ ನಾನು ತಪ್ಪು ಮಾಡಿಲ್ಲ ಅಂತ ತಂದೆ, ತಾಯಿಗೆ ಗೊತ್ತು ಅಂತ ವಿಡಿಯೋದಲ್ಲಿರುವ ಯುವತಿ ಹೇಳಿದ್ದಾಳೆ.

https://twitter.com/vasanthabeshwar/status/1374971291170578434?ref_src=twsrc%5Etfw%7Ctwcamp%5Etweetembed%7Ctwterm%5E1374971291170578434%7Ctwgr%5E%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fbigbrakingsidilediyindhamattonduvidiyobidugadeeebaariheliroduenugottaillidevidiyo-newsid-n265126554


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ