Breaking News

ಸುಧಾಕರ್ ಹೇಳಿಕೆಯನ್ನು ಅಸ್ತ್ರವಾಗಿ ಬಳಸಿಕೊಂಡ ಸಿದ್ದರಾಮಯ್ಯ

Spread the love

ಬೆಂಗಳೂರು, ಮಾ.25- ಡಾ.ಕೆ.ಸುಧಾಕರ್ ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ ಕೂಡಲೇ ಬಿಜೆಪಿ ಸರ್ಕಾರ ಸುಧಾಕರ್ ವಿರುದ್ಧ ಐಪಿಎಸ್ ಸೆಕ್ಷನ್ 494 ಮತ್ತು 495ರ ಅನ್ವಯ ಕ್ರಿಮಿನಲ್ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ. ಹೀಗಾಗಿ ಸುಧಾಕರ್ ಹೇಳಿಕೆಯನ್ನೇ ಆಧರಿಸಿ ಕಾನೂನು ಕ್ರಮ ಜರುಗಿಸಬೇಕು ಎಂದಿದ್ದಾರೆ. ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯಿಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಬಿಜೆಪಿಯ ಶಾಸಕರೆಲ್ಲರೂ ಸ್ವಯಿಚ್ಚೆಯಿಂದ ತನಿಖೆಗೆ ಒಳಗಾಗಬೇಕು.

ತನಿಖೆ ನಡೆಸಲು ಕೂಡಲೇ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಜೆಪಿ ಶಾಸಕರೆಲ್ಲರೂ ಪತ್ರ ಬರೆದು ಮನವಿ ಮಾಡಬೇಕೆಂದು ಸಲಹೆ ನೀಡಿದ್ದಾರೆ. ರಾಜ್ಯದ ಯಾವ ಶಾಸಕರೂ ಏಕ ಪತ್ನಿವ್ರತಸ್ಥರಲ್ಲ ಎಂದು ಸುಧಾಕರ್ ನೀಡಿರುವ ಹೇಳಿಕೆ ಯಡಿಯೂರಪ್ಪ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೂ ಅನ್ವಯವಾಗುತ್ತದೆ.

ಸುಧಾಕರ್ ಸಾಮಾನ್ಯ ವ್ಯಕ್ತಿಯಲ್ಲ. ಜವಾಬ್ದಾರಿಯುತ ಜನಪ್ರತಿನಿಧಿ. ಅವರ ಹೇಳಿಕೆಗಳಿಂದ ಶಾಸಕರ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಕ್ರಿಮಿನಲ್ ಕೇಸು ದಾಖಲಿಸಿ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ