Breaking News
Home / ಜಿಲ್ಲೆ / ಬೆಂಗಳೂರು / ಯುವತಿಗೆ ರಕ್ಷಣೆ ನೀಡಲು ರಾಜ್ಯ ಮಹಿಳಾ ಆಯೋಗ ಬದ್ಧ: ಪ್ರಮೀಳಾ ನಾಯ್ಡು

ಯುವತಿಗೆ ರಕ್ಷಣೆ ನೀಡಲು ರಾಜ್ಯ ಮಹಿಳಾ ಆಯೋಗ ಬದ್ಧ: ಪ್ರಮೀಳಾ ನಾಯ್ಡು

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ತನಗೆ ಹಾಗೂ ತನ್ನ ತಂದೆ – ತಾಯಿಗಳಿಗೆ ರಕ್ಷಣೆ ನೀಡುವಂತೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ಯುವತಿ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಹೇಳಿದೆ.

ಈ ಕುರಿತು ಮಾತನಾಡಿರುವ ಮಹಿಳಾ ಆಯೋಗದ ಅಧ್ಯಕ್ಷೆ, ಒಂದು ಹೆಣ್ಣು ಮಗಳು ತಾನು ತೊಂದರೆಯಲ್ಲಿದ್ದೇನೆ ರಕ್ಷಣೆ ನೀಡಿ ಎಂದು ಕೇಳುವಾಗ ರಕ್ಷಣೆ ನೀಡುವುದು ಮಹಿಳಾ ಆಯೋಗದ ಕರ್ತವ್ಯ. ಹಾಗಾಗಿ ಸಿಡಿಯಲ್ಲಿರುವ ಯುವತಿ ಯಾರೇ ಆಗಿರಲಿ, ಆಕೆ ಯಾರು? ಆಕೆಯ ಹಿನ್ನೆಲೆಯೇನು? ಆಕೆಯ ಹಿಂದೆ ರಾಜಕೀಯ ನಾಯಕರಿದ್ದಾರೆಯೇ ಇದೆಲ್ಲವೂ ನಮಗೆ ಅನಗತ್ಯ. ಆಕೆ ಒಂದು ಹೆಣ್ಣುಮಗಳು ಎಂಬ ಕಾರಣಕ್ಕೆ ಆಯೋಗದಿಂದ ರಕ್ಷಣೆ ನೀಡುವುದು ಜವಾಬ್ದಾರಿ ಎಂದು ಹೇಳಿದರು.

 

ಹಾಗಾಗಿ ಸಿಡಿ ಯುವತಿ ಧೈರ್ಯವಾಗಿ ಬಂದು ಆಯೋಗಕ್ಕೆ ದೂರು ನೀಡಬಹುದು. ಆಕೆಯ ರಕ್ಷಣೆ ಜವಾಬ್ದಾರಿ ನಮ್ಮದು. ಈ ಬಗ್ಗೆ ಈಗಾಗಲೇ ನಾನು ಗೃಹ ಇಲಾಖೆಗೆ ಹಾಗೂ ಪೊಲೀಸ್ ಕಮೀಷನರ್ ಅವರಿಗೂ ಮಾಹಿತಿ ನೀಡಿದ್ದೇನೆ. ಯುವತಿ ಹೆದರುವ ಅಗತ್ಯವಿಲ್ಲ ದೂರು ನೀಡಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ