Breaking News

ಕೋವಿಡ್: ಮತ್ತಷ್ಟು ಕ್ರಮ

Spread the love

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಸರಕಾರವು ಎಲ್ಲ ಹಬ್ಬಗಳ ಸಾರ್ವಜನಿಕ ಆಚರಣೆಯ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.

ಹೊಸ ಆದೇಶದಂತೆ ಮುಂಬರುವ ಯುಗಾದಿ, ಹೋಳಿ, ಷಬ್‌-ಎ- ಬರಾತ್‌, ಗುಡ್‌ ಫ್ರೈಡೇ ಸಹಿತ ಹಲವು ಹಬ್ಬಗಳು ಮತ್ತು ಸಂಬಂಧಿತ ಸಮಾರಂಭಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಬಾರದು. ಈ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಮತ್ತಿತರ ಕಡೆಗಳಲ್ಲಿ ಸಭೆ-ಸಮಾರಂಭ ನಡೆಸದಂತೆ ಸೂಚಿಸಲಾಗಿದೆ.

ನಿಯಮ ಉಲ್ಲಂ‍ಘಿಸುವವರ ವಿರುದ್ಧ ವಿಪತ್ತು ನಿರ್ವಹಣ ಕಾಯ್ದೆ- 2005ರ ವಿಭಾಗ 51ರಿಂದ 60ರ ಅನ್ವಯ ಐಪಿಸಿ ಸೆಕ್ಷನ್‌ 188ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಕಾಯ್ದೆ- 2020ರಡಿ ಕ್ರಮ ಜರುಗಿಸಲಾಗುವುದು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಎಚ್ಚರಿಸಿದ್ದಾರೆ.

ಮುಂಜಾಗ್ರತೆ ವಹಿಸಿ :

ಎಲ್ಲ ಹಬ್ಬಗಳ ಆಚರಣೆ ಸಂದರ್ಭ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸುವವರ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ| ಸುಧಾಕರ್‌ ತಿಳಿಸಿದ್ದಾರೆ.

ನಿರ್ಬಂಧ ಬೇಡ :

ಜನರಲ್ಲಿ ಆತಂಕ ಮೂಡಿಸದೆ, ಆರ್ಥಿಕ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರದೆ ವೈಜ್ಞಾನಿಕವಾಗಿ ಪರಿಸ್ಥಿತಿ ನಿಭಾಯಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಈ ಕುರಿತು ಅವರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಸಮಯೋಚಿತ ಮತ್ತು ಸಕಾಲಿಕ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಸೋಂಕುಪೀಡಿತರ ಕೈಗೆ ಮುದ್ರೆ :

ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವವರು ಆರ್‌ಟಿ ಪಿಸಿಆರ್‌ ನೆಗೆಟಿವ್‌ ವರದಿ ತರುವುದು ಎ. 1ರಿಂದ ಕಡ್ಡಾಯ. ಕೋವಿಡ್ ಸೋಂಕು ದೃಢಪಟ್ಟವರು ಮತ್ತು ಹೋಂ ಐಸೋಲೇಶನ್‌ನಲ್ಲಿ ಇರುವವರ ಕೈಗೆ ಈ ಹಿಂದೆ ಇದ್ದಂತೆ ಕೋವಿಡ್‌ ಮುದ್ರೆ ಹಾಕಲಾಗುವುದು. ಈ ನಿಯಮ ಶುಕ್ರವಾರದಿಂದ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ| ಸುಧಾಕರ್‌ ಹೇಳಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ