Breaking News

ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ಧಿಸಲು ನನ್ನ ಹೆಸರನ್ನೇ ಹೈಕಮಾಂಡ್ ಗೆ ಕಳಿಸಲಿಲ್ಲ: ಪ್ರಕಾಶ ಹುಕ್ಕೇರಿ ಅಸಮಾಧಾನ

Spread the love

ಬೆಳಗಾವಿ : “ಬಿಜೆಪಿಯಿಂದ ಸುರೇಶ ಅಂಗಡಿ ಕುಟುಂಬದ ಯಾರಿಗೇ ಟಿಕೆಟ್ ನೀಡಲಿ, ನಾನು ಅವರ ಪರವಾಗಿ ಕ್ಷೇತ್ರದಲ್ಲೆಲ್ಲ ಸುತ್ತಾಡಿ ಪ್ರಚಾರ ಮಾಡುತ್ತೇನೆ. ನನ್ನ ಮಗನ ಚುನಾವಣೆಗೆ ಕೆಲಸ ಮಾಡಿದ ರೀತಿಯಲ್ಲೇ ಮಾಡುತ್ತೇನೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಏನ್ ಮಾಡುತ್ತೋ ಮಾಡ್ಕೊಳ್ಳಿ ನೋಡೋಣ” ಎಂದು ಸವಾಲೆಸೆದಿದ್ದ ಮಾಜಿ ಸಂಸದ, ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಇದೀಗ ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರ  ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈಗ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ನಾಮಪತ್ರ ಸಲ್ಲಿಕೆ ಮುಗಿಯಲಿ. ನಂತರ ಹೇಳುತ್ತೇನೆ ಎಂದು ಪ್ರಕಾಶ ಹುಕ್ಕೇರಿ ತಿಳಿಸಿದ್ದಾರೆ.

ಆಗ ನಾನು ಹೇಳಿದ್ದು ನಿಜ. ಈಗಷ್ಟೆ ಟಿಕೆಟ್ ಘೋಷಣೆಯಾಗಿದೆ. ನನ್ನ ನಿರ್ಧಾರವನ್ನು ತರಾತುರಿಯಲ್ಲಿ ಪ್ರಕಟಿಸುವ ಅಗತ್ಯವಿಲ್ಲ. ಇನ್ನೂ ಸಮಯವಿದೆ. ಮುಂದೆ ಹೇಳುತ್ತೇನೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ಧಿಸಲು ನನ್ನ ಹೆಸರನ್ನೇ ಹೈಕಮಾಂಡ್ ಗೆ ಕಳಿಸಲಿಲ್ಲ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ