Breaking News

ಶಾಕಿಂಗ್ ನ್ಯೂಸ್ : ಮೂರು ತಿಂಗಳ ಕಾಲ ಅಬ್ಬರಿಸಲಿದೆ ಕೊರೊನಾ!

Spread the love

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಈ ನಡುವೆ ಜನತೆಗೆ ತಜ್ಞರು ಬಿಗ್ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಜುಲೈ ವರೆಗೂ ಕಾಡುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ಅತಂಕ ಮತ್ತಷ್ಟು ಹೆಚ್ಚಲಿದ್ದು, ಈ ಹಿನ್ನೆಲೆಯಲ್ಲಿ ಜನರು ಹೆಚ್ಚು ಜಾಗರೂಕರಾಗಿ ಇರಬೇಕು. ಹೊರಗಡೆ ಸುತ್ತಾಟ ಕಡಿಮೆ ಮಾಡಬೇಕು. ರಾಜ್ಯದಲ್ಲಿ ಇದೀಗ ಕೊರೊನಾ 2 ನೇ ಶುರುವಾಗಿದ್ದು, 2ನೇ ಅಲೆ ಜುಲೈ ವರೆಗೂ ಕಾಡಲಿದೆ ಎಂದು ತಜ್ಞರ ಸಮಿತಿ ಸರ್ಕಾರಕ್ಕೆ ಹೇಳಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕೊರೊನಾ ಮೊದಲನೆ ಅಲೆಯಲ್ಲೂ ತೀವ್ರತೆ ಹೆಚ್ಚಾಗಿತ್ತು. ಮಾರ್ಚ್ ನಿಂದ ಅಗಸ್ಟ್ ವರೆಗೆ ಕೊರೊನಾ ವೈರಸ್ ಅಬ್ಬರ ಹೆಚ್ಚಾಗಿತ್ತು. ಈಗ 2 ನೇ ಅಲೆ ವೈರಸ್ ಜುಲೈ ವರೆಗೂ ಜನರಿಗೆ ಕಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ